ರಾಜಕೀಯ

ಸಮ್ಮಿಶ್ರ ಸರ್ಕಾರ ಇನ್ ಸಂಕಟ: ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಓಮರ್ ಅಬ್ದುಲ್ಲಾ ಹೇಳಿದ್ದಿಷ್ಟು

Srinivas Rao BV
ಶ್ರೀನಗರ: ಕಾಂಗ್ರೆಸ್-ಜೆಡಿಎಸ್  ಮೈತ್ರಿ ಕೂಟದ 13 ಶಾಸಕರು ರಾಜೀನಾಮೆ ಸಲ್ಲಿಸಿದ್ದರೂ ತಮ್ಮ ಸರ್ಕಾರ  ಸುಸೂತ್ರವಾಗಿ ಮುಂದುವರಿಯಲಿದೆ ಎಂಬ  ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆತ್ಮ ವಿಶ್ವಾಸದ  ಹೇಳಿಕೆಗೆ  ಸೋಮವಾರ  ಪ್ರತಿಕ್ರಿಯಿಸಿರುವ ನ್ಯಾಷನಲ್ ಕಾನ್ಪರೆನ್ಸ್ ಅಧ್ಯಕ್ಷ ಓಮರ್ ಅಬ್ದುಲ್ಲಾ, ಯಾರಿಗೂ ಗೊತ್ತಿಲ್ಲದ ವಿಚಾರಗಳು ಕುಮಾರಸ್ವಾಮಿ ಅವರಿಗೆ ಗೊತ್ತಿರಬಹುದು ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ  ಅವರು  ಗಂಭೀರ ವಿಶ್ವಾಸವನ್ನು ಪ್ರದರ್ಶಿಸಿದ್ದಾರೆ..!  ಯಾರಿಗೂ ಗೊತ್ತಿಲ್ಲದ  ವಿಷಯ ಅವರಿಗೆ ಗೊತ್ತಿರುವಂತೆ ಕಾಣುತ್ತದೆ  ಎಂದು   ಜಮ್ಮು ಕಾಶ್ಮೀರ  ಮಾಜಿ  ಮುಖ್ಯಮಂತ್ರಿಯೂ ಆಗಿರುವ  ಅಬ್ದುಲ್ಲಾ  ಟ್ವೀಟ್ ನಲ್ಲಿ  ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಮೈತ್ರಿಕೂಟ ಸರ್ಕಾರದಲ್ಲಿ  ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಇತ್ಯರ್ಥಗೊಳ್ಳುವ ಸೂಚನೆ ನೀಡಿದ್ದ,  ಮುಖ್ಯಮಂತ್ರಿ ಕುಮಾರಸ್ವಾಮಿ, ತಮ್ಮ ಸರ್ಕಾರ ಸುಸೂತ್ರವಾಗಿ  ನಡೆಯಲಿದೆ ಎಂದು ಹೇಳಿದ್ದರು.
ಕರ್ನಾಟಕದ ಮೈತ್ರಿಕೂಟ ಡಜನ್ ಶಾಸಕರು  ವಿಧಾನಸಭಾ ಸ್ಪೀಕರ್ ಕಾರ್ಯಾಲಯಕ್ಕೆ  ತಮ್ಮ ರಾಜೀನಾಮೆ ಸಲ್ಲಿಸಿರುವ ಕಾರಣ 13 ತಿಂಗಳ  ಜೆಡಿಎಸ್; ಕಾಂಗ್ರೆಸ್  ಮೈತ್ರಿ ಸರ್ಕಾರ  ಡೋಲಾಯಮಾನ ಸ್ಥಿತಿಗೆ ತಲುಪಿದೆ. ಒಂದು ವೇಳೆ ಸ್ಪೀಕರ್ ರಾಜೀನಾಮೆ ಗಳನ್ನು ಸ್ವೀಕರಿಸಿದರೆ  ಸರ್ಕಾರ  ಬಹುಮತ ಕಳೆದುಕೊಳ್ಳಲಿದೆ.
SCROLL FOR NEXT