ಡಿ ಕೆ ಶಿವಕುಮಾರ್ 
ರಾಜಕೀಯ

ವಿಮಾನ ನಿಲ್ದಾಣದಲ್ಲಿ ಬಿಎಸ್ ವೈ ಆಪ್ತ ಸಹಾಯಕ, ಡಿಕೆಶಿ ನಡುವೆ ಜಟಾಪಟಿ, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು!

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಸಚಿವ ಡಿಕೆ ಶಿವಕುಮಾರ್ ಹಾಗೂ ಪಕ್ಷೇತರ ಶಾಸಕ ಆರ್ ಶಂಕರ್...

ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಸಚಿವ ಡಿಕೆ ಶಿವಕುಮಾರ್ ಹಾಗೂ ಪಕ್ಷೇತರ ಶಾಸಕ ಆರ್ ಶಂಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನತ್ತ ತೆರಳಲು ಸಹಾಯ ಮಾಡಿದ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕ ಸಂತೋಷ್ ನಡುವೆ ಸೋಮವಾರ ತೀವ್ರ ಜಟಾಪಟಿ ನಡೆದಿದೆ.
ಇಂದು ರಾಜೀನಾಮೆ ನೀಡಿ ವಿಮಾನ ನಿಲ್ದಾಣದತ್ತ ತೆರಳಿದ ಆರ್.ಶಂಕರ್ ಬಗ್ಗೆ ಮಾಹಿತಿ ಪಡೆದು ವಿಮಾನ ನಿಲ್ದಾಣದತ್ತ ತೆರಳಿದ ಡಿಕೆ ಶಿವಕುಮಾರ್ ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂತೋಷ್ ಎದುರಾಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ವಿಮಾನ ನಿಲ್ದಾಣದಲ್ಲಿದ್ದ ಆರ್ ಶಂಕರ್ ಅವರನ್ನು ಮುಂಬೈಗೆ ಕಳುಹಿಸಲು ಬೇಕಾದ ಸಿದ್ಧತೆಗಳನ್ನು ಸಂತೋಷ್  ಪೂರ್ಣಗೊಳಿಸಿದ್ದರು. 
ಇದರಿಂದ ಆಕ್ರೋಶಗೊಂಡ ಡಿಕೆ ಶಿವಕುಮಾರ್ ಅವರು ಸಂತೋಷ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಲ್ದಾಣದ ಒಳಗಡೆ ಅಲ್ಲಿದ್ದ ಸಾರ್ವಜನಿಕರ ಮುಂದೆಯೇ ಶಿವಕುಮಾರ್ ಮತ್ತು ಸಂತೋಷ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT