ಸಾಂದರ್ಭಿಕ ಚಿತ್ರ 
ರಾಜಕೀಯ

ಇಂದು ಕಾಂಗ್ರೆಸ್ ಶಾಸಕಾಂಗ ಸಭೆ : ಮೈತ್ರಿ ಸರ್ಕಾರ ಅಳಿವು ಉಳಿವಿನ ತೀರ್ಮಾನ

ಮೈತ್ರಿ ಸರ್ಕಾರ ಬಹುಮತ ಕಳೆದಕೊಂಡು ಸರ್ಕಾರ ಪತನಕ್ಕೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ...

ಬೆಂಗಳೂರು: ಮೈತ್ರಿ ಸರ್ಕಾರ ಬಹುಮತ ಕಳೆದಕೊಂಡು ಸರ್ಕಾರ ಪತನಕ್ಕೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಮಂಗಳವಾರ ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ.ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆಯ ನೇತೃತ್ವವನ್ನು ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್, ಶಾಸಕಾಂಗ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಹಿಸಿಕೊಳ್ಳಲಿದ್ದಾರೆ.
ಇಂದಿನ ಸಭೆಯಲ್ಲಿ ಆಪರೇಷನ್ ಕಮಲಕ್ಕೆ ಯಾರೂ ಒಳಗಾಗದಂತೆ ತಡೆಯುವುದು, ಅತೃಪ್ತ ಶಾಸಕರ ಮನವೊಲಿಸಿ ವಾಪಸ್ ಕರೆತರುವುದು,ಮೈತ್ರಿ ಸರ್ಕಾರವನ್ನು ರಕ್ಷಿಸಿಕೊಳ್ಳಲು ಶಾಸಕರು ಒಗ್ಗಟ್ಟು ಪ್ರದರ್ಶನ, ವಿಧಾನ ಸಭಾ ಅಧಿವೇಶನದಲ್ಲಿ ಮಹತ್ವದ ವಿಚಾರಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸುವುದು.ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾದರೆ ಸರ್ಕಾರ ವಿಸರ್ಜನೆ,ಮಧ್ಯಂತರ ಚುನಾವಣೆಗೆ ತೆರಳುವುದು, ಸರ್ಕಾರ ಪತನವಾದರೆ ವಿರೋಧ ಪಕ್ಷದಲ್ಲಿ ಕುಳಿತು ಆಡಳಿತ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸುವುದು ಸೇರಿದಂತೆ ಮಹತ್ವದ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT