ಸಿದ್ದರಾಮಯ್ಯ 
ರಾಜಕೀಯ

ಶಾಸಕರ ರಾಜೀನಾಮೆ ಬಿಕ್ಕಟ್ಟು: ಸಿಎಲ್ ಪಿ ಸಭೆ ಮುಕ್ತಾಯ

ರಾಜ್ಯ ಮೈತ್ರಿ ಸರ್ಕಾರದಲ್ಲಿ ಶಾಸಕರು ರಾಜೀನಾಮೆ ಸಲ್ಲಿಸಿರುವುದರಿಂದ ಸರ್ಕಾರದ ಭವಿಷ್ಯ ಅನಿಶ್ಚಿತತೆಯಲ್ಲಿದ್ದು, ಈ ಮಧ್ಯೆ ...

ಬೆಂಗಳೂರು: ರಾಜ್ಯ ಮೈತ್ರಿ ಸರ್ಕಾರದಲ್ಲಿ ಶಾಸಕರು ರಾಜೀನಾಮೆ ಸಲ್ಲಿಸಿರುವುದರಿಂದ ಸರ್ಕಾರದ ಭವಿಷ್ಯ ಅನಿಶ್ಚಿತತೆಯಲ್ಲಿದ್ದು, ಈ ಮಧ್ಯೆ ಮಂಗಳವಾರ ಬೆಂಗಳೂರಿನ ವಿಧಾನ ಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ಸ್ವಲ್ಪ ಹೊತ್ತಿಗೆ ಮೊದಲು ಮುಕ್ತಾಯವಾಗಿದೆ.
ನಾಡಿದ್ದು 12ರಂದು ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು ಅದಕ್ಕಿಂತ ಮೊದಲು ಇಂದು ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಹಳ ಮಹತ್ವ ಪಡೆದಿದೆ.
ಶಾಸಕರ ಸಾಮೂಹಿಕ ರಾಜೀನಾಮೆ ಮಧ್ಯೆ 13 ತಿಂಗಳ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಹೇಗೆ ಉಳಿಸಿಕೊಳ್ಳುವುದು ಎಂಬ ಕಾರ್ಯತಂತ್ರಗಳ ಬಗ್ಗೆ ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ನಾಯಕರು ಚರ್ಚೆ ನಡೆಸಿದ್ದಾರೆ. 
ಈ ಮಧ್ಯೆ ವಸತಿ ಖಾತೆ ಸಚಿವ ಎನ್ ನಾಗರಾಜು ಎಂ ಟಿ ಬಿ, ಅನಾರೋಗ್ಯ ನಿಮಿತ್ತ ಇಂದು ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗುತ್ತಿಲ್ಲ ಎಂದು ಪಕ್ಷದ ಅಧ್ಯಕ್ಷರಿಗೆ ಪತ್ರ ಕಳುಹಿಸಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸದ್ಯ ಉಂಟಾಗಿರುವ ಬಿಕ್ಕಟ್ಟು ಶಮನವಾಗಲಿದ್ದು ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಇಂದು ಕೂಡ ಹೇಳಿಕೆ ನೀಡುತ್ತಿದ್ದಾರೆ.
ಎರಡೂ ಪಕ್ಷಗಳ ಸಚಿವರು ರಾಜೀನಾಮೆ ನೀಡಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಚಿವ ಸಂಪುಟ ಪುನರ್ರಚನೆಗೆ ಮುಕ್ತ ಅವಕಾಶ ನೀಡಿ ಅತೃಪ್ತ ಶಾಸಕರಿಗೆ ಅವಕಾಶ ನೀಡಲು ಹಾದಿ ಮಾಡಿಕೊಟ್ಟಿದ್ದಾರೆ. ಸ್ಪೀಕರ್ ಸಚಿವರುಗಳ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT