ರಾಜಕೀಯ

ರಾಜ್ಯಪಾಲರು ಬಿಜೆಪಿಯ ಏಜೆಂಟ್: ದಿನೇಶ್ ಗುಂಡೂರಾವ್ ಆರೋಪ

Shilpa D
ಬೆಂಗಳೂರು: ಶಾಸಕರ ರಾಜೀನಾಮೆ ವಿಚಾರವನ್ನು ಆದಷ್ಟು ಬೇಗ ಇತ್ಯರ್ಥ ಮಾಡಿ ಎಂದು ಸ್ಪೀಕರ್ ಗೆ ರಾಜ್ಯಪಾಲರು ಒತ್ತಾಯ ಮಾಡಿದ್ದಾರೆ. ಗವರ್ನರ್ ಬಿಜೆಪಿಯ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಕುಮಾರ ಕೃಪ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ರಾಜಭವನವನ್ನ ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಡಿ ಕೆ ಶಿವಕುಮಾರ್ ಅವರಿಗೆ ಹೋಟೆಲ್ ಬಳಿ ತಡೆ ಒಡ್ಡಿದ್ದಾರೆ. 
ಬಿಜೆಪಿ ಪಕ್ಷದವರು ಏನು  ಮಾಡುತ್ತಿದ್ದಾರೆ ಅಂತ ಗೊತ್ತಾಗುತ್ತಿದೆ. ಮುಂಬಯಿಯಲ್ಲಿರುವ ಹೋಟೆಲ್ ಸರ್ಕಾರಿ ಜಾಗ ಅಲ್ಲ. ಅದು ಖಾಸಗಿ ಹೋಟೆಲ್, ಡಿ ಕೆ ಶಿವಕುಮಾರ್ ಅಲ್ಲಿ ರೂಂ ಬುಕ್ ಮಾಡಿದ್ದಾರೆ ಆದರೂ ಅವರಿಗೆ ಒಳ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಆಪರೇಷನ್ ಕಮಲಕ್ಕೆ ಕೋಟಿ ಕೋಟಿ ಹಣ ಎಲ್ಲಿಂದ ಬರುತ್ತಿದೆ ಎಂದು ಪ್ರಶ್ನಿಸಿದ ಅವರು, ಅತೃಪ್ತರು ಸುಪ್ರೀಂ ಕೋರ್ಟ್ ಹೋಗೋದಕ್ಕೆ ಸ್ವಂತಂತ್ರರು ಎಂದು ಹೇಳಿದ್ದಾರೆ,  ನಮ್ಮ ಸ್ಪೀಕರ್ ರಮೇಶ್ ಕುಮಾರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದ್ದಾರೆ.
SCROLL FOR NEXT