ವಿಧಾನಸೌಧದಲ್ಲಿ ಹೈಡ್ರಾಮ: ಶಾಸಕ ಡಾ.ಸುಧಾಕರ್ ಮನವೊಲಿಕೆ ಯತ್ನ ವಿಫಲ: ಪೊಲೀಸ್ ಭದ್ರತೆಯಲ್ಲಿ ಹೊರಬಂದ ಶಾಸಕ 
ರಾಜಕೀಯ

ವಿಧಾನಸೌಧದಲ್ಲಿ ಹೈಡ್ರಾಮ: ಶಾಸಕ ಡಾ.ಸುಧಾಕರ್ ಮನವೊಲಿಕೆ ಯತ್ನ ವಿಫಲ: ಪೊಲೀಸ್ ಭದ್ರತೆಯಲ್ಲಿ ಹೊರಬಂದ ಶಾಸಕ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ನ ಡಾ.ಜೆ ಸುಧಾಕರ್ ಅವರನ್ನು ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ನಾಯಕರು ಅವರನ್ನು ಒತ್ತಾಯಪೂರ್ವಕವಾಗಿ ಎಳೆದೊಯ್ದು ವಿಧಾನಸೌಧದಲ್ಲಿ ಹೈಡ್ರಾಮ

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ನ ಡಾ.ಜೆ ಸುಧಾಕರ್ ಅವರನ್ನು ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ನಾಯಕರು ಅವರನ್ನು ಒತ್ತಾಯಪೂರ್ವಕವಾಗಿ ಎಳೆದೊಯ್ದು ವಿಧಾನಸೌಧದಲ್ಲಿ ಹೈಡ್ರಾಮ ನಡೆದಿದೆ. 

ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್ ರಾಜೀನಾಮೆ ನೀಡುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಪ್ರಿಯಾಂಕ್ ಖರ್ಗೆ ಸುಧಾಕರ್ ಅವರನ್ನು ಮನವೊಲಿಸಲು ಒತ್ತಾಯಪೂರ್ವಕವಾಗಿ ಕೆ.ಜೆ ಜಾರ್ಜ್ ಅವರ ಕೊಠಡಿಗೆ ಎಳೆದು ಕರೆದೊಯ್ದರು. ಸಿದ್ದರಾಮಯ್ಯ ಅವರು ಆಗಮಿಸಿ ಸುಧಾಕರ್ ಮನವೊಲಿಕೆಗೆ ಯತ್ನಿಸಿದರಾದರೂ ಅದು ಯಶಸ್ವಿಯಾಗಲಿಲ್ಲ. ಈ ವೇಳೆ ಸುಧಾಕರ್ ಅವರನ್ನು ಬಿಟ್ಟು ಕಳಿಸುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಿಧಾನಸೌಧದಲ್ಲಿ ವಾಗ್ವಾದ ನಡೆದಿದೆ. 

ರಾಜಕೀಯ ನಾಯಕರ ನಡುವೆ ಗದ್ದಲ-ಗಲಾಟೆ ವಾತಾವರಣ ನಿರ್ಮಾಣವಾಗುತ್ತಿದ್ದಂತೆಯೇ ವಿಧಾನಸೌಧಕ್ಕೆ ಆಗಮಿಸಿದ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದರು. ಸಂಧಾನ ಮಾತುಕತೆ ವಿಫಲಗೊಂಡ ಹಿನ್ನೆಲೆಯಲ್ಲಿ ಶಾಸಕ ಸುಧಾಕರ್ ಪೊಲೀಸ್ ಭದ್ರತೆಯಲ್ಲಿ ಜಾರ್ಜ್ ಕೊಠಡಿಯಿಂದ ಹೊರಬಂದು ರಾಜಭವನಕ್ಕೆ ತೆರಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT