ಮುಂಬಯಿ ಪೊಲೀಸರ ವಶಕ್ಕೆ ಡಿಕೆ ಶಿವಕುಮಾರ್ 
ರಾಜಕೀಯ

ಅತೃಪ್ತ ಶಾಸಕರನ್ನು ಭೇಟಿ ಮಾಡಲು ಕಾದು ಕುಳಿತಿದ್ದ ಸಚಿವ ಡಿಕೆ ಶಿವಕುಮಾರ್ ಮುಂಬಯಿ ಪೊಲೀಸರ ವಶಕ್ಕೆ

ಅತೃಪ್ತ ಶಾಸಕರನ್ನು ಭೇಟಿ ಮಾಡಲೇಬೇಕೆಂದು ಹಠ ಹಿಡಿದು ಬೆಳಗ್ಗೆಯಿಂದ ಮುಂಬಯಿಯ ಹೋಟೆಲ್ ಮುಂದೆ ಕಾದು ಕುಳಿತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ...

ಮುಂಬಯಿ: ಅತೃಪ್ತ ಶಾಸಕರನ್ನು ಭೇಟಿ ಮಾಡಲೇಬೇಕೆಂದು ಹಠ ಹಿಡಿದು ಬೆಳಗ್ಗೆಯಿಂದ ಮುಂಬಯಿಯ ಹೋಟೆಲ್ ಮುಂದೆ ಕಾದು ಕುಳಿತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅತೃಪ್ತ ಶಾಸಕರನ್ನು ಭೇಟಿ ಮಾಡಲು ಬೆಳಗ್ಗೆ 8 ಗಂಟೆಯಿಂದ ಡಿಕೆಶಿ ಬಿಗಿ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಬಳಿ ಕಾದು ಕುಳಿತಿದ್ದರು, ಹೋಟೆಲ್ ಮುಂಬಾಗ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಹೋಟೆಲ್ ಸುತ್ತಮುತ್ತ ನಿಷೇದಾಜ್ಞೆ ಜಾರಿ ಗೊಳಿಸಿತ್ತು.
ನಿಷೇದಾಜ್ಞೆಯ ನಡುವೆಯೂ  ಹೋಟೆಲ್ ಮುಂದೆ ಕುಳಿತಿದ್ದ ಶಿವಕುಮಾರ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು, ಹೀಗಾಗಿ ಸಚಿವ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ, 
ಕಲಿನಾ ವಿವಿ ವಿಶ್ರಾಂತಿ ಗೃಹಕ್ಕೆ

ಇನ್ನು ಮುಂಬೈ ಪೋಲೀಸರು ವಶಕ್ಕೆ ಪಡೆದಿರುವ ಕರ್ನಾಟಕದ ಸಚಿವ ಡಿಕೆ ಶಿವಕುಮಾರ್ ಮತ್ತು ಇತರೆ ಕಾಂಗ್ರೆಸ್ ಮುಖಂಡರನ್ನು  ಕಲಿನಾ ವಿಶ್ವವಿದ್ಯಾನಿಲಯದ ವಿಶ್ರಾಂತಿ ಗೃಹಕ್ಕೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ; ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಸಿದ್ದರಾಮಯ್ಯ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

SCROLL FOR NEXT