ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಗಿರೀಶ್ ಕಾರ್ನಾಡ್, ಧನಂಜಯ್ ಕುಮಾರ್, ಸಿ.ಎಸ್. ಶಿವಳ್ಳಿ ಅವರಿಗೆ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ

ಇತ್ತೀಚಿಗೆ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್, ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್, ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಮತ್ತಿತರ ಗಣ್ಯರಿಗೆ ವಿಧಾನಮಂಡಲದಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬೆಂಗಳೂರು: ಇತ್ತೀಚಿಗೆ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್,  ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್, ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಮತ್ತಿತರ ಗಣ್ಯರಿಗೆ ವಿಧಾನಮಂಡಲದಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಇವರಲ್ಲದೇ, ಮಾಜಿ ಶಾಸಕರಾದ ಕೆ ಎಲ್ ಶಿವಲಿಂಗೇಗೌಡ, ಎಸ್.ಎಸ್. ಅರಕೇರಿ, ದಮಯಂತಿ ಬೋರೇಗೌಡ, ಚನ್ನವೀರಯ್ಯ ಶಾಂತಯ್ಯ , ಮುತ್ತಿನ ಬೆಳ್ಳಿ ಮಠದ ಡಾ. ವಿಜಯ್ ಕುಮಾರ್ ಖಂಡ್ರೆ, ಎಚ್. ಗೋಪಾಲ ಭಂಡಾರಿ, ಶಾರದವ್ವ ಎಂ ಪಟ್ಟಣ, ಡಾ. ಎಚ್. ಬಿ. ನಂಜಪ್ಪ, ಸತ್ಯನಾರಾಯಣ, ಸಂಭಾಜಿ ಲಕ್ಷಣ ಪಾಟೀಲ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸದನ ಸಮಾವೇಶಗೊಳ್ಳುತ್ತಿದ್ದಂತೆ  ಸಭಾಧ್ಯಕ್ಷ ಕೆ. ಆರ್. ರಮೇಶ್ ಕುಮಾರ್ ಸಂತಾಪ ಸೂಚಕ ನಿರ್ಣಯ ಮಂಡಿಸಿ, ಮೃತರ ಗುಣಗಾನ ಮಾಡಿದರು. ಈ ನಿರ್ಣಯ ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತಿತರರು ಅಗಲಿದ ಗಣ್ಯರ ಕೊಡುಗೆಯನ್ನು ಸ್ಮರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಶ್ನೆ ಪತ್ರಿಕೆ ಸೋರಿಕೆ: NEET UG 2026 ರದ್ದು, ಸಿಬಿಐ ತನಿಖೆಗೆ ಆದೇಶ; ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ

ತಮಿಳುನಾಡು ರಾಜಕೀಯದಲ್ಲಿ ರೋಚಕ ಟ್ವಿಸ್ಟ್: TVKಗೆ ಬೆಂಬಲ ಘೋಷಿಸಿದ AIADMKಯ ಷಣ್ಮುಗಂ ಬಣ!

Himanta Biswa Sarma Swearing in: US ರಾಯಭಾರಿ ಗೋರ್ ಭಾಗಿಯಾಗಿದ್ದು ವಿಶೇಷ ಏಕೆ? ಅಸ್ಸಾಂ ನಲ್ಲಿ ಅಮೆರಿಕದ ಹಿತಾಸಕ್ತಿ ಏನು?

ಬೆಂಗಳೂರಿನ ಹೊರವಲಯದಲ್ಲಿ ಹಗಲು ದರೋಡೆ; ಸಿನಿಮಾ ಸ್ಟೈಲ್​​ನಲ್ಲಿ 23 ಲಕ್ಷ ರೂ. ದೋಚಿ ಪರಾರಿ!

ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ 'ವಿಶೇಷ ಅಧಿಕಾರಿ' ಸ್ಥಾನ ನೀಡಿದ CM ಜೋಸೆಫ್ ವಿಜಯ್!

SCROLL FOR NEXT