ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಗಿರೀಶ್ ಕಾರ್ನಾಡ್, ಧನಂಜಯ್ ಕುಮಾರ್, ಸಿ.ಎಸ್. ಶಿವಳ್ಳಿ ಅವರಿಗೆ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ

ಇತ್ತೀಚಿಗೆ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್, ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್, ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಮತ್ತಿತರ ಗಣ್ಯರಿಗೆ ವಿಧಾನಮಂಡಲದಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬೆಂಗಳೂರು: ಇತ್ತೀಚಿಗೆ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್,  ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್, ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಮತ್ತಿತರ ಗಣ್ಯರಿಗೆ ವಿಧಾನಮಂಡಲದಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಇವರಲ್ಲದೇ, ಮಾಜಿ ಶಾಸಕರಾದ ಕೆ ಎಲ್ ಶಿವಲಿಂಗೇಗೌಡ, ಎಸ್.ಎಸ್. ಅರಕೇರಿ, ದಮಯಂತಿ ಬೋರೇಗೌಡ, ಚನ್ನವೀರಯ್ಯ ಶಾಂತಯ್ಯ , ಮುತ್ತಿನ ಬೆಳ್ಳಿ ಮಠದ ಡಾ. ವಿಜಯ್ ಕುಮಾರ್ ಖಂಡ್ರೆ, ಎಚ್. ಗೋಪಾಲ ಭಂಡಾರಿ, ಶಾರದವ್ವ ಎಂ ಪಟ್ಟಣ, ಡಾ. ಎಚ್. ಬಿ. ನಂಜಪ್ಪ, ಸತ್ಯನಾರಾಯಣ, ಸಂಭಾಜಿ ಲಕ್ಷಣ ಪಾಟೀಲ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸದನ ಸಮಾವೇಶಗೊಳ್ಳುತ್ತಿದ್ದಂತೆ  ಸಭಾಧ್ಯಕ್ಷ ಕೆ. ಆರ್. ರಮೇಶ್ ಕುಮಾರ್ ಸಂತಾಪ ಸೂಚಕ ನಿರ್ಣಯ ಮಂಡಿಸಿ, ಮೃತರ ಗುಣಗಾನ ಮಾಡಿದರು. ಈ ನಿರ್ಣಯ ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತಿತರರು ಅಗಲಿದ ಗಣ್ಯರ ಕೊಡುಗೆಯನ್ನು ಸ್ಮರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT