ರಾಜಕೀಯ

ಯೂತ್ ಕಾಂಗ್ರೆಸ್ ಸುಪ್ರೀಂಗೆ ಯಾವುದೇ ಅರ್ಜಿ ಸಲ್ಲಿಸಿಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ

Sumana Upadhyaya
ಬೆಂಗಳೂರು: ಬಂಡಾಯ ಶಾಸಕರಿಗೆ ಸಂಬಂಧಿಸಿದಂತೆ ಯೂತ್ ಕಾಂಗ್ರೆಸ್ ಯಾವುದೇ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಯುವ ವಿಭಾಗ ಎಂಬ ಹೆಸರಿನ ಯಾವುದೇ ಸಂಘಟನೆ ಇಲ್ಲ. ಸುಪ್ರೀಂ ಕೋರ್ಟ್ ಗೆ ಆರ್ಜಿ ಸಲ್ಲಿಸಿದೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಮಾಧ್ಯಮಗಳು ಈ ಸಂಬಂಧ ಯಾವುದೇ ವರದಿ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ದಿನೇಶ್ ಗುಂಡೂರಾವ್ ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ.
SCROLL FOR NEXT