ಕೋಟಾ ಶ್ರೀನಿವಾಸ್ ಪೂಜಾರಿ 
ರಾಜಕೀಯ

ಜೆಡಿಎಸ್ ಜೊತೆ ಹೋಗಲು ಮಾನಸಿಕವಾಗಿ ಸಿದ್ಧರಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಜೆಡಿಎಸ್ ಮುಖಂಡ ಹಾಗೂ ಸಚಿವ ಸಾ.ರಾ. ಮಹೇಶ್ ಜೊತೆ ಕೆ.ಎಸ್. ಈಶ್ವರಪ್ಪ ಭೇಟಿಯಾಗಿದ್ದು ಸಾಂದರ್ಭಿಕ ಮತ್ತು ಆಕಸ್ಮಿಕ. ...

ಬೆಂಗಳೂರು: ಜೆಡಿಎಸ್ ಮುಖಂಡ ಹಾಗೂ ಸಚಿವ ಸಾ.ರಾ. ಮಹೇಶ್ ಜೊತೆ ಕೆ.ಎಸ್. ಈಶ್ವರಪ್ಪ ಭೇಟಿಯಾಗಿದ್ದು ಸಾಂದರ್ಭಿಕ ಮತ್ತು ಆಕಸ್ಮಿಕ. ಇದಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಪಪಡಿಸಲಾಗಿದೆ. ಜೆಡಿಎಸ್ ಜೊತೆಗೆ ಹೋಗಲು ನಾವು ಮಾನಸಿಕವಾಗಿ ಸಿದ್ಧರಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸದಲ್ಲಿ ಮೊದಲ ಬಾರಿಗೆ ಬಹುಮತವಿಲ್ಲದ ಸರ್ಕಾರವನ್ನು ವಿಪಕ್ಷ ಸದನದಲ್ಲಿ ಎದುರಿಸುತ್ತಿದೆ. ಆಡಳಿತ ನಡೆಸಲು ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಬಹುಮತ ಇಲ್ಲದ ಕಾರಣ ಅವಿಶ್ವಾಸದ ಪ್ರಶ್ನೆಯೇ ಇಲ್ಲ. ಸರ್ಕಾರ ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದರು.
ಬಿಜೆಪಿ ರಾಜ್ಯ ಉಸ್ತುವಾರಿ ಕೆ.ಮುರಳೀಧರ ರಾವ್ ಮತ್ತು ಶಾಸಕ ಕೆ.ಎಸ್‌.ಈಶ್ವರಪ್ಪ ಅವರನ್ನು ಜೆಡಿಎಸ್‌ನ ಸಚಿವ ಸಾ.ರಾ.ಮಹೇಶ್‌ ಗುರುವಾರ ರಾತ್ರಿ ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿದ್ದರು. ಇದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹ, ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT