ಸಾರಾ ಮಹೇಶ್, ಈಶ್ವರಪ್ಪ ಮತ್ತು ಕೆ ಮುರುಳಿಧರ್ ರಾವ್ 
ರಾಜಕೀಯ

ಸಾರಾ ಮಹೇಶ್ ಈಶ್ವರಪ್ಪ ಭೇಟಿ: 'ದಳಪತಿ'ಗಳ ಹೊಸ ದಾಳ, 'ಕೈ' ತಳಮಳ, 'ಕಮಲ' ವಿಲವಿಲ!

ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ವಿಶ್ವಾಸಮತ ಯಾಚನೆ ಮಾಡುವುದಾಗಿ ನಿನ್ನೆ ವಿಧಾನಸಭೆ ಕಲಾಪದಲ್ಲಿ ಘೋಷಿಸಿದ ಹಿನ್ನೆಲೆಯಲ್ಲಿ ಅತೃಪ್ತರ ...

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ವಿಶ್ವಾಸಮತ ಯಾಚನೆ ಮಾಡುವುದಾಗಿ ನಿನ್ನೆ ವಿಧಾನಸಭೆ ಕಲಾಪದಲ್ಲಿ ಘೋಷಿಸಿದ ಹಿನ್ನೆಲೆಯಲ್ಲಿ ಅತೃಪ್ತರ ಮನವೊಲಿಸಲು ಸಮ್ಮಿಶ್ರ ಸರ್ಕಾರದ ಮುಖಂಡರು ಮುಂದಾಗಿದ್ದಾರೆ.
ಜೆಡಿಎಸ್ ನ ಕೆಲವು ಸಚಿವರು ತೆರೆಮರೆಯಲ್ಲಿ ಬಿಜೆಪಿ ಜೊತೆ ಸಖ್ಯ ಬೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಕುಮಾರಸ್ವಾಮಿ ಆಪ್ತ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ ಬಿಜೆಪಿ ಮುಖಂಡರ ಜೊತೆಗೆ ನಡೆಸಿದ ಮಾತುಕತೆ ಪ್ಲಾನ್ ಬಿ ಎಂದೇ ಕರೆಸಿಕೊಳ್ಳುತ್ತಿದೆ.
ಸಾ.ರಾ ಮಹೇಶ್, ಬಿಜೆಪಿ ನಾಯಕರಾದ ಕೆ.ಎಸ್ ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಕೆ,. ಮುರುಳಿಧರ್ ರಾವ್ ಭೇಟಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ, 2006 ರಲ್ಲಿ ನಡೆದಂತೆ ಕಾಂಗ್ರೆಸ್ ಗೆ ಕೈಕೊಟ್ಟು ಜೆಡಿಎಸ್ ಬಿಜೆಪಿ ಜೊತೆ ಸೇರಿಸಿ ಸರ್ಕಾರ ರಚಿಸಲಿದೆ ಎಂಬ ಊಹಾಪೋಹಗಳು ಎಲ್ಲೆಡೆ ಹರಿದಾಡುತ್ತಿವೆ.
ಆದರೆ ಈ ಬಗ್ಗೆ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರು ಸ್ಪಷ್ಟನೆ ನೀಡಿದ್ದು, ಈ ಭೇಟಿಗೆ ಯಾವುದೇ ಪ್ರಾಮುಖ್ಯತೆ ನೀಡಬಾರದೆಂದು ಹೇಳಿಕೆ ನೀಡಿದ್ದಾರೆ,
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಜೆಡಿಎಸ್ ನ ತ ತಮ್ಮ ಅತ್ಯಾಪ್ತ ಶಾಸಕರಿಗೆ ಏನಾದರೂ ಮಾಡಿ ಎಂದು ಹೇಳಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ, ಇದಕ್ಕಾಗಿ ಜೆಡಿಎಸ್ ಮುಖಂಡರು ಬಿಜೆಪಿ ಮುಂದೆ ಪ್ರಸ್ತಾವನೆಯಿಟ್ಟಿದ್ದು ಬಿಜೆಪಿಯಿಂದ ಯಾವುದೇ ಪ್ರತಿಕ್ರಿಯೆ  ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.
ಸಾರಾ ಮಹೇಶ್ ಬಿಜೆಪಿ ನಾಯಕರು ಸುಮಾರು 25 ನಿಮಿಷಗಳ ಕಾಲ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಮತ್ತೊಬ್ಬ ಬಿಜೆಪಿ ನಾಯಕ ತಿಳಿಸಿದ್ದಾರೆ,  ಆದರೆ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಮುಖದಲ್ಲಿರುವ ಆತ್ಮವಿಶ್ವಾಸ ನೋಡಿದರೇ  ಸಖತ್ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈಶ್ವರಪ್ಪ- ಸಾರಾ ಮಹೇಶ್ ಭೇಟಿ  ರಾಜಕೀಯವಾಗಿ ಹೊಸ ಟ್ವಿಸ್ಟ್ ಪಡೆದುಕೊಂಡಿದೆ, ಕಾಂಗ್ರೆಸ್ ಅತೃಪ್ತರನ್ನು ಬಗ್ಗಿಸಲು ನಡೆದ ಪ್ಲಾನ್ ಇದಾಗಿದೆ ಎಂದು ಹೇಳಲಾಗುತ್ತಿದೆ, ಆದರೆ ಸಾರಾ ಮಹೇಶ್ ಭೇಟಿಯನ್ನು ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸುತ್ತಿದ್ದಾರೆ ಎನ್ನಲಾಗಿದೆ.
ಈಶ್ವರಪ್ಪ ಸಿಎಂ ಆಗುವ ಲೆಕ್ಕಚಾರ ಇಟ್ಟುಕೊಂಡಿದ್ದಾರೆ, ಈ ಹಿನ್ನೆಲೆಯಲ್ಲಿ ಸಾರಾ ಮಹೇಶ್ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.. ಆದರೆ ಯಡಿಯೂರಪ್ಪ ಟೀಂ ಕೂಡ ಈ ಭೇಟಿಯಿಂದಾಗಿ ವಿಚಲಿತಗೊಂಡಿದೆ ಎಂದು ತಿಳಿದು ಬಂದಿದೆ,.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT