ರಾಜಕೀಯ

ಅದೆಲ್ಲಾ ಸುಳ್ಳು! ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳೋಕೆ ತಲೆ ಕೆಟ್ಟಿದ್ಯಾ?: ಯಡಿಯೂರಪ್ಪ

Raghavendra Adiga
ಬೆಂಗಳೂರು: ಬೆಳಗಾವಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ನನಗೇನು ತಲೆ ಕೆಟ್ಟಿದೆಯಾ ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಡಾಲರ್ಸ್ ಕಾಲೋನಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ನನಗೇನು ತಲೆ ಕೆಟ್ಟಿದೆಯಾ ? ಅವರಿಂದಾಗಿಯೇ ಕಾಂಗ್ರೆಸ್ ಶಾಸಕರು ಮುಂಬೈಗೆ ತೆರಳಿ ವಾಸ್ತವ್ಯ ಹೂಡಿದ್ದಾರೆ. ಹೀಗಾಗಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ಮೈತ್ರಿ ಸರ್ಕಾರಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದಲೇ ಸಂಕಷ್ಟ ಬಂದಿರುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ
ಇಷ್ಟಕ್ಕೂ ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿಗೆ ಬರುತ್ತೇನೆ ಎಂದು ಹೇಳಿಲ್ಲ, ಮಾದ್ಯಮಗಳು ಅನಗತ್ಯವಾಗಿ ಅವರ ಹೆಸರನ್ನು ಪ್ರಸ್ತಾಪ ಮಾಡುತ್ತಿವೆ. ಹಾಗಾಗಿ ಅವರೆಂದಿಗೂ ಬಿಜೆಪಿಗೆ ಬರಲ್ಲ ಎಂದು ಬಿಎಸ್‍ವೈ ಸ್ಪಷ್ತನೆ ನೀಡಿದ್ದಾರೆ.
ಸಚಿವ ಎಂಟಿಬಿ ನಾಗರಾಜ್ ರಾಜೀನಾಮೆ ವಾಪಸ್ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಎಂಟಿಬಿ ಕುರಿತು ನಾನು ಏನೂ ಪ್ರತಿಕ್ರಿಯೆ ನೀಡಲ್ಲ, ಮುಂದಿನ ರಾಜಕೀಯ ಬೆಳವಣಿಗೆ ನೋಡಿಕೊಂಡು ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಕಾದು ನೋಡಿ ಎಂದು ಹೇಳಿದ್ದಾರೆ.
SCROLL FOR NEXT