ವಿ. ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ಕಾಂಗ್ರೆಸ್ ಬಂಡಾಯ ಶಾಸಕರು ಪಶ್ಚ್ಯಾತಾಪ ಪಡುವುದಿಲ್ಲ- ಮಾಜಿ ಕೇಂದ್ರ ಸಚಿವ ವಿ ಶ್ರೀನಿವಾಸ್ ಪ್ರಸಾದ್

ಎಲ್ಲಾ ಬಂಡಾಯ ಶಾಸಕರು ತಮ್ಮ ಪಕ್ಷಗಳಿಗೆ ಮರಳಲು ಸಿದ್ದರಿಲ್ಲದ ಕಾರಣ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಊಹಿಸಿದ್ದಾರೆ.

ಮೈಸೂರು: ಎಲ್ಲಾ ಬಂಡಾಯ ಶಾಸಕರು ತಮ್ಮ ಪಕ್ಷಗಳಿಗೆ  ವಾಪಾಸ್ಸಾಗಲು ಸಿದ್ದರಿಲ್ಲದ ಕಾರಣ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಊಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ನಾಯಕರ ನಡುವೆ ಪರಸ್ಪರ ಗೌರವ, ಸಮನ್ವಯತೆ ಇಲ್ಲದಂತಾಗಿದೆ. ರಾಜ್ಯ ತೀವ್ರ ಬರಿಸ್ಥಿತಿ ಎದುರಿಸುತ್ತಿರುವಾಗ ಮೈತ್ರಿ ನಾಯಕರು ಪರಸ್ಪರ ಕಚ್ಟಾಟದಲ್ಲಿ ಒಂದು ವರ್ಷ ಕಳೆದಿದ್ದಾರೆ ಎಂದು ಹೇಳಿದರು.
ನಾನು ಮತ್ತು ಎಚ್ . ವಿಶ್ವನಾಥ್ 45 ವರ್ಷಗಳಿಂದ ಸ್ನೇಹಿತರು. ಆಗಾಗ್ಗೆ ಭೇಟಿಯಾಗುತ್ತಿರುತ್ತೇವೆ. ಆದರೆ, ಈಗ ನಡೆದಿರುವ ರಾಜಕೀಯ ಬೆಳವಣಿಗೆಗೆ ನಾನು ಜವಾಬ್ದಾರನಲ್ಲ . ಪ್ರಸ್ತಕ್ತ ರಾಜಕೀಯ ಬೆಳವಣಿಗೆಗೂ ಮುಂಚೆ ನಮ್ಮ ಭೇಟಿ ಆಗಿರುವುದು ಕಾಕತಾಳೀಯ ಅಷ್ಟೇ ಎಂದರು.
  ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿದ್ದವರನ್ನು ಸಮನ್ವಯ ಸಮಿತಿಗೆ ಸೇರಿಸಿಕೊಳ್ಳಲಿಲ್ಲ. ಈ ಹಿಂದೆ ಅವರು ಹಳ್ಳಿ ಹಕ್ಕಿಯ ಹಾಡು ಎಂಬ ಪುಸ್ತಕ ಬರೆದಿದ್ದರು. ಈಗ ಹಳ್ಳಿ ಹಕ್ಕಿಯ ಗೋಳು ಎಂಬ ಪುಸ್ತಕ ಬರೆಯಬೇಕಿದೆ ಎಂದರು.
ಪಕ್ಷ ತೊರೆಯಲು ಏನು ಕಾರಣ ಎಂಬುದನ್ನು ವಿಶ್ವನಾಥ್ ಈಗಾಗಲೇ ಹೇಳಿದ್ದಾರೆ . ಅವರಿಗೆ ಹಿಂಸೆ ಕೊಟ್ಟಿದ್ದಾರೆ. ಅವಮಾನ ಮಾಡಿದ್ದಾರೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT