ವಿ. ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ಕಾಂಗ್ರೆಸ್ ಬಂಡಾಯ ಶಾಸಕರು ಪಶ್ಚ್ಯಾತಾಪ ಪಡುವುದಿಲ್ಲ- ಮಾಜಿ ಕೇಂದ್ರ ಸಚಿವ ವಿ ಶ್ರೀನಿವಾಸ್ ಪ್ರಸಾದ್

ಎಲ್ಲಾ ಬಂಡಾಯ ಶಾಸಕರು ತಮ್ಮ ಪಕ್ಷಗಳಿಗೆ ಮರಳಲು ಸಿದ್ದರಿಲ್ಲದ ಕಾರಣ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಊಹಿಸಿದ್ದಾರೆ.

ಮೈಸೂರು: ಎಲ್ಲಾ ಬಂಡಾಯ ಶಾಸಕರು ತಮ್ಮ ಪಕ್ಷಗಳಿಗೆ  ವಾಪಾಸ್ಸಾಗಲು ಸಿದ್ದರಿಲ್ಲದ ಕಾರಣ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಊಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ನಾಯಕರ ನಡುವೆ ಪರಸ್ಪರ ಗೌರವ, ಸಮನ್ವಯತೆ ಇಲ್ಲದಂತಾಗಿದೆ. ರಾಜ್ಯ ತೀವ್ರ ಬರಿಸ್ಥಿತಿ ಎದುರಿಸುತ್ತಿರುವಾಗ ಮೈತ್ರಿ ನಾಯಕರು ಪರಸ್ಪರ ಕಚ್ಟಾಟದಲ್ಲಿ ಒಂದು ವರ್ಷ ಕಳೆದಿದ್ದಾರೆ ಎಂದು ಹೇಳಿದರು.
ನಾನು ಮತ್ತು ಎಚ್ . ವಿಶ್ವನಾಥ್ 45 ವರ್ಷಗಳಿಂದ ಸ್ನೇಹಿತರು. ಆಗಾಗ್ಗೆ ಭೇಟಿಯಾಗುತ್ತಿರುತ್ತೇವೆ. ಆದರೆ, ಈಗ ನಡೆದಿರುವ ರಾಜಕೀಯ ಬೆಳವಣಿಗೆಗೆ ನಾನು ಜವಾಬ್ದಾರನಲ್ಲ . ಪ್ರಸ್ತಕ್ತ ರಾಜಕೀಯ ಬೆಳವಣಿಗೆಗೂ ಮುಂಚೆ ನಮ್ಮ ಭೇಟಿ ಆಗಿರುವುದು ಕಾಕತಾಳೀಯ ಅಷ್ಟೇ ಎಂದರು.
  ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿದ್ದವರನ್ನು ಸಮನ್ವಯ ಸಮಿತಿಗೆ ಸೇರಿಸಿಕೊಳ್ಳಲಿಲ್ಲ. ಈ ಹಿಂದೆ ಅವರು ಹಳ್ಳಿ ಹಕ್ಕಿಯ ಹಾಡು ಎಂಬ ಪುಸ್ತಕ ಬರೆದಿದ್ದರು. ಈಗ ಹಳ್ಳಿ ಹಕ್ಕಿಯ ಗೋಳು ಎಂಬ ಪುಸ್ತಕ ಬರೆಯಬೇಕಿದೆ ಎಂದರು.
ಪಕ್ಷ ತೊರೆಯಲು ಏನು ಕಾರಣ ಎಂಬುದನ್ನು ವಿಶ್ವನಾಥ್ ಈಗಾಗಲೇ ಹೇಳಿದ್ದಾರೆ . ಅವರಿಗೆ ಹಿಂಸೆ ಕೊಟ್ಟಿದ್ದಾರೆ. ಅವಮಾನ ಮಾಡಿದ್ದಾರೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

SCROLL FOR NEXT