ಸುಪ್ರೀಂ ಕೋರ್ಟ್ 
ರಾಜಕೀಯ

ಕರ್ನಾಟಕ ಬಿಕ್ಕಟ್ಟು: ಐವರು ಅತೃಪ್ತ ಶಾಸಕರ ಮನವಿ ಆಲಿಸಲು ಸುಪ್ರೀಂ ಅಸ್ತು

ರಾಜ್ಯದ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

ನವದೆಹಲಿ: ರಾಜ್ಯದ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ರಾಜ್ಯದ ಶಾಸಕರಾದ ಮುನಿರತ್ನ, ಎಂಟಿಬಿ ನಾಗರಾಜ್, ಆನಂದ್ ಸಿಂಗ್, ಡಾ. ಕೆ.ಸುಧಾಕರ್ ಹಾಗೂ ರೋಷನ್ ಬೇಗ್ ಅವರುಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠವು ಬಂಡಾಯ ಶಾಸಕರ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರ ಮನವಿಯನ್ನು  ಅಂಗೀಕರಿಸಿದೆ.
ಇದೇ ವೇಳೆ ಉಳಿದ ಶಾಸಕರ ಅರ್ಜಿಯನ್ನು ನಾಳೆ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಾಲಯ ಹೇಳಿದೆ. 
ಸ್ಪೀಕರ್ ತಮ್ಮ ರಾಜೀನಾಮೆಯನ್ನು ಸ್ವೀಕರಿಸದಿರುವ ಬಗೆಗೆ ವಿರೋಧ ವ್ಯಕ್ತಪಡಿಸಿ ಹತ್ತು ಶಾಸಕರೊಡನೆ ರಾಜ್ಯದ ಇನ್ನೂ ಐವರು ಶಾಸಕರು ಜುಲೈ 13 ರಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಒಕ್ಕೂಟದ 10 ಬಂಡಾಯ ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಕುರಿತು ಜುಲೈ 16 ರವರೆಗೆ ಕರ್ನಾಟಕ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್ ನಿರ್ಬಂಧಿಸಿತ್ತು.
ಏತನ್ಮಧ್ಯೆ 14 ಬಂಡಾಯ ಶಾಸಕರು ಪೊವಾಯಿ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ  ಕರ್ನಾಟಕ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಲ್ಲಿಕರ್ಜುನ್ ಖರ್ಗೆ ಮತ್ತು ಗುಲಾಮ್ ನಬಿ ಆಜಾದ್ ಅವರಿಂದ ತಮಗೆ "ಬೆದರಿಕೆ" ಇರುವುದಾಗಿ ದೂರು ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT