ರಾಜಕೀಯ

ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್ ರಂತೆ ವರ್ತನೆ: ಶೋಭಾ ಕರಂದ್ಲಾಜೆ ಟೀಕೆ

Nagaraja AB
ಬೆಂಗಳೂರು:ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ.
 ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಸ್ಥಾನದಲ್ಲಿರುವ ರಮೇಶ್ ಕುಮಾರ್ ಅವರು ನೃತ್ಯಗಾರ್ತಿಯರು ಮತ್ತು ಹೆಣ್ಣು ಮಕ್ಕಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಅವರ ಮಾನಸಿಕತೆಯನ್ನು ತೋರಿಸುತ್ತದೆ. ಅವರು ಕಾಂಗ್ರೆಸ್  ಏಜೆಂಟ್  ಎಂಬಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.
ಭರತನಾಟ್ಯ, ಯಕ್ಷಗಾನ, ಮತ್ತು ನೃತ್ಯಗಳಿಂದ ಅನೇಕ ಮಂದಿ ದೇವರನ್ನು ಒಲಿಸಿಕೊಂಡಿದ್ದಾರೆ. ಇಂತಹ ನೃತ್ಯದ ಬಗ್ಗೆ ಸ್ಪೀಕರ್  ರಮೇಶ್ ಕುಮಾರ್ ಅವಹೇಳನಕಾರಿ ಹಾಗೂ ಹಗುರವಾಗಿ ಮಾತನಾಡಿದ್ದಾರೆ , ಅವರು ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.
SCROLL FOR NEXT