ಅತೃಪ್ತ ಶಾಸಕರ ಪರ ಸುಪ್ರೀಂ ತೀರ್ಪು: ಬಿಜೆಪಿ ವಿಶ್ವಾಸ 
ರಾಜಕೀಯ

ಅತೃಪ್ತ ಶಾಸಕರ ಪರ ಸುಪ್ರೀಂ ತೀರ್ಪು: ಬಿಜೆಪಿ ವಿಶ್ವಾಸ

ಸುಪ್ರೀಂಕೋರ್ಟ್‌ನಲ್ಲಿ ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ಸಲ್ಲಿಸಿದ ಶಾಸಕರ ಅರ್ಜಿ ವಿಚಾರಣೆಯ ವಾದ- ಪ್ರತಿವಾದ ಆಲಿಸಿದ ಬಿಜೆಪಿ ಶಾಸಕರಲ್ಲಿ ಸಂತಸ ಅರಳಿಸಿದೆ. ನಾಳೆ ಸುಪ್ರೀಂ ಕೋರ್ಟ್....

ಬೆಂಗಳೂರು: ಸುಪ್ರೀಂಕೋರ್ಟ್‌ನಲ್ಲಿ ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ಸಲ್ಲಿಸಿದ ಶಾಸಕರ ಅರ್ಜಿ ವಿಚಾರಣೆಯ ವಾದ- ಪ್ರತಿವಾದ ಆಲಿಸಿದ ಬಿಜೆಪಿ ಶಾಸಕರಲ್ಲಿ ಸಂತಸ ಅರಳಿಸಿದೆ. ನಾಳೆ ಸುಪ್ರೀಂ ಕೋರ್ಟ್ ನೀಡುವ ತೀರ್ಪು ಅತೃಪ್ತ ಶಾಸಕರ ಪರ ಬರಲಿದೆ ಎಂದು ಬಿಜೆಪಿ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಮಡಾ ಹೋಟೇಲಿನ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಕುಡುಚಿ ಶಾಸಕ ರಾಜೀವ್, ಮುಖುಲ್ ರೋಹ್ಟಗಿ ಅವರ ವಾದ ಗಮನಿಸಿದ ನಂತರ ಮೈತ್ರಿ ಸರ್ಕಾರ ಸ್ಪೀಕರ್ ಅವರನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಇಡೀ ರಾಜ್ಯಕ್ಕೆ ಗೊತ್ತಾಗಿದೆ.ರಾಜೀನಾಮೆ ನೀಡುವುದು ಶಾಸಕರ ಹಕ್ಕು. ಅವರ ಸ್ವತಂತ್ರ ನಿರ್ಧಾರಕ್ಕೆ ಬಿಟ್ಟದ್ದಾಗಿದೆ.ನಮಗೆ ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಇಡೀ ರಾಜ್ಯದ ಜನರು ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತಿದ್ದಾರೆ. ಜನರ ನಿರೀಕ್ಷೆ ಆದಷ್ಟು ಶೀಘ್ರದಲ್ಲಿ ಈಡೇರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಬಿಜೆಪಿ ಹಿರಿಯ ನಾಯಕ ಸಿಟಿ ರವಿ, ಮೂವರೂ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ಅದ್ಭುತವಾಗಿ ವಾದ ಮಂಡನೆ ಮಾಡಿದ್ದಾರೆ. ನಾಳೆ ಅಂತಿಮ ತೀರ್ಪು ಹೊರಬೀಳಲಿದ್ದು, ತೀರ್ಪು ಏನೇ ಬಂದರೂ ರಾಜ್ಯ ಮೈತ್ರಿ ಸರ್ಕಾರವಂತೂ ಉಳಿಯುವುದಿಲ್ಲ.ಗುರುವಾರ ಸಂಜೆ ವೇಳೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಇತಿಹಾಸದ ಪುಟ ಸೇರಲಿದೆ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!