ರಾಮಲಿಂಗಾ ರೆಡ್ಡಿ 
ರಾಜಕೀಯ

ವಿಶ್ವಾಸ ಮತಯಾಚನೆ ವೇಳೆ ರಾಜಿನಾಮೆ ವಾಪಸ್ ಬಗ್ಗೆ ನಿರ್ಧಾರ ಪ್ರಕಟಿಸುತ್ತೇನೆ: ರಾಮಲಿಂಗಾರೆಡ್ಡಿ

ಮಾಜಿ ಸಚಿವ ಹಾಗೂ ಶಾಸಕ ರಾಮಲಿಂಗಾ ರೆಡ್ಡಿ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ...

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ರಾಮಲಿಂಗಾ ರೆಡ್ಡಿ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ.  ಈ ಹಿನ್ನೆಲೆಯಲ್ಲಿ ಗುರುವಾರ ಅವರು ವಿಧಾನಸಭೆ ಕಲಾಪಕ್ಕೆ ಹಾಜರಾಗಲಿದ್ದಾರೆ. 
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವ ವೇಳೆ ನನ್ನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಶಾಸಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ನಾನು ಯಾವುದೇ ಸ್ಥಾನಮಾನಕ್ಕೋಸ್ಕರ ರಾಜೀನಾಮೆ ನೀಡಿಲ್ಲ. ಪಕ್ಷದ ಆಂತರಿಕ ವಿಚಾರಕ್ಕಾಗಿ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ವಾಪಸ್‌ ಪಡೆಯಬೇಕೇ, ಬೇಡವೇ ಎಂಬ ನನ್ನ ನಿರ್ಧಾರವನ್ನು ಗುರುವಾರ ವಿಶ್ವಾಸಮತ ಯಾಚನೆ ವೇಳೆಯೇ ಪ್ರಕಟಿಸುತ್ತೇನೆ. ಮುಖ್ಯಮಂತ್ರಿ ವಿಶ್ವಾಸ ಮತಯಾಚನೆ ಮಾಡುತ್ತಿರುವುದರಿಂದ ಸದನಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ಅತೃಪ್ತ ಶಾಸಕರು ನಿಮ್ಮನ್ನೇ ತಮ್ಮ ನಾಯಕರು ಎಂದು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಮೇಲಿನ ಗೌರವಕ್ಕೆ ಆ ರೀತಿ ಹೇಳಿರಬಹುದು. ಆದರೆ, ಅವರ್ಯಾರೂ ನನ್ನ ಸಂಪರ್ಕದಲ್ಲಿಲ್ಲ. ನಾನು ಅವರೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT