ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಕೋರ್ಟಿನ ಆದೇಶ ಅತೃಪ್ತ ಶಾಸಕರಿಗೆ ನೈತಿಕ ಬಲ ತಂದುಕೊಟ್ಟಿದೆ: ಬಿಎಸ್ ಯಡಿಯೂರಪ್ಪ

15 ಮಂದಿ ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಕುರಿತು ಸಂವಿಧಾನದ ಆಶಯಕ್ಕೆ ಸರಿಯಾಗಿ ...

ಬೆಂಗಳೂರು: 15 ಮಂದಿ ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಕುರಿತು ಸಂವಿಧಾನದ ಆಶಯಕ್ಕೆ ಸರಿಯಾಗಿ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದ್ದು, ಕೋರ್ಟಿನ ಆದೇಶ ಅತೃಪ್ತ ಶಾಸಕರಿಗೆ ನೈತಿಕ ಬಲ ತಂದುಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಅತೃಪ್ತ ಶಾಸಕರ ರಾಜಿನಾಮೆ ಕುರಿತು ಇಂದು ಸುಪ್ರೀಂಕೋರ್ಟ್ ತನ್ನ ತೀರ್ಪು ಪ್ರಕಟಿಸಿದ್ದು, ನಿರ್ದಿಷ್ಟ ಸಮಯದಲ್ಲಿ ರಾಜಿನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದ್ದು ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು ಎಂದು ಅವರು ಬಣ್ಣಿಸಿದರು.
ವಿಪ್ ಅತೃಪ್ತ ಶಾಸಕರಿಗೆ ಅನ್ವಯವಾಗದಿರುವುದರಿಂದ ಕೋರ್ಟ್ ಆದೇಶ ನೀಡಿರುವುದರಿಂದ ನಾಳೆ ವಿಧಾನಸಭೆಯಲ್ಲಿ ನಡೆಯುವ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ 15 ಮಂದಿ ಅತೃಪ್ತ ಶಾಸಕರು ಹಾಜರಾಗಲಿಕ್ಕಿಲ್ಲ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಹುಮತದ ವಿಶ್ವಾಸ ಕಳೆದುಕೊಂಡು ರಾಜೀನಾಮೆ ನೀಡಲಿದ್ದಾರೆ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿಯವರು ಬಹುಮತ ಕಳೆದುಕೊಂಡಿದ್ದಾರೆ. ಬಹುಮತ ಇಲ್ಲದಿರುವಾಗ ನಾಳೆ ಅವರು ರಾಜೀನಾಮೆ ನೀಡಲೇಬೇಕು. ಇದು ಕೇವಲ ಮಧ್ಯಂತರ ಆದೇಶವಷ್ಟೆ, ಸ್ಪೀಕರ್ ಅವರ ಅಧಿಕಾರವನ್ನು ಸುಪ್ರೀಂ ಕೋರ್ಟ್ ಭವಿಷ್ಯದಲ್ಲಿ ನಿರ್ಧರಿಸಲಿದೆ ಎಂದು ಹೇಳಿದರು. 
ಎಚ್‌ಡಿ ಕುಮಾರಸ್ವಾಮಿಯವರಿಂದಾಗಿ ರಾಜ್ಯದಲ್ಲಿ ಅರಾಜಕತೆ ಇದೆ, ಈ ತೀರ್ಪಿನ ನಂತರ ಅವರು ತಕ್ಷಣ ರಾಜೀನಾಮೆ ನೀಡಬೇಕು, ವಿಶ್ವಾಸ ಮತಕ್ಕಾಗಿ ಕಾಯಬಾರದು ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT