ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಕೋರ್ಟಿನ ಆದೇಶ ಅತೃಪ್ತ ಶಾಸಕರಿಗೆ ನೈತಿಕ ಬಲ ತಂದುಕೊಟ್ಟಿದೆ: ಬಿಎಸ್ ಯಡಿಯೂರಪ್ಪ

15 ಮಂದಿ ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಕುರಿತು ಸಂವಿಧಾನದ ಆಶಯಕ್ಕೆ ಸರಿಯಾಗಿ ...

ಬೆಂಗಳೂರು: 15 ಮಂದಿ ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಕುರಿತು ಸಂವಿಧಾನದ ಆಶಯಕ್ಕೆ ಸರಿಯಾಗಿ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದ್ದು, ಕೋರ್ಟಿನ ಆದೇಶ ಅತೃಪ್ತ ಶಾಸಕರಿಗೆ ನೈತಿಕ ಬಲ ತಂದುಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಅತೃಪ್ತ ಶಾಸಕರ ರಾಜಿನಾಮೆ ಕುರಿತು ಇಂದು ಸುಪ್ರೀಂಕೋರ್ಟ್ ತನ್ನ ತೀರ್ಪು ಪ್ರಕಟಿಸಿದ್ದು, ನಿರ್ದಿಷ್ಟ ಸಮಯದಲ್ಲಿ ರಾಜಿನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದ್ದು ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು ಎಂದು ಅವರು ಬಣ್ಣಿಸಿದರು.
ವಿಪ್ ಅತೃಪ್ತ ಶಾಸಕರಿಗೆ ಅನ್ವಯವಾಗದಿರುವುದರಿಂದ ಕೋರ್ಟ್ ಆದೇಶ ನೀಡಿರುವುದರಿಂದ ನಾಳೆ ವಿಧಾನಸಭೆಯಲ್ಲಿ ನಡೆಯುವ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ 15 ಮಂದಿ ಅತೃಪ್ತ ಶಾಸಕರು ಹಾಜರಾಗಲಿಕ್ಕಿಲ್ಲ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಹುಮತದ ವಿಶ್ವಾಸ ಕಳೆದುಕೊಂಡು ರಾಜೀನಾಮೆ ನೀಡಲಿದ್ದಾರೆ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿಯವರು ಬಹುಮತ ಕಳೆದುಕೊಂಡಿದ್ದಾರೆ. ಬಹುಮತ ಇಲ್ಲದಿರುವಾಗ ನಾಳೆ ಅವರು ರಾಜೀನಾಮೆ ನೀಡಲೇಬೇಕು. ಇದು ಕೇವಲ ಮಧ್ಯಂತರ ಆದೇಶವಷ್ಟೆ, ಸ್ಪೀಕರ್ ಅವರ ಅಧಿಕಾರವನ್ನು ಸುಪ್ರೀಂ ಕೋರ್ಟ್ ಭವಿಷ್ಯದಲ್ಲಿ ನಿರ್ಧರಿಸಲಿದೆ ಎಂದು ಹೇಳಿದರು. 
ಎಚ್‌ಡಿ ಕುಮಾರಸ್ವಾಮಿಯವರಿಂದಾಗಿ ರಾಜ್ಯದಲ್ಲಿ ಅರಾಜಕತೆ ಇದೆ, ಈ ತೀರ್ಪಿನ ನಂತರ ಅವರು ತಕ್ಷಣ ರಾಜೀನಾಮೆ ನೀಡಬೇಕು, ವಿಶ್ವಾಸ ಮತಕ್ಕಾಗಿ ಕಾಯಬಾರದು ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT