ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಕೋರ್ಟಿನ ಆದೇಶ ಅತೃಪ್ತ ಶಾಸಕರಿಗೆ ನೈತಿಕ ಬಲ ತಂದುಕೊಟ್ಟಿದೆ: ಬಿಎಸ್ ಯಡಿಯೂರಪ್ಪ

15 ಮಂದಿ ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಕುರಿತು ಸಂವಿಧಾನದ ಆಶಯಕ್ಕೆ ಸರಿಯಾಗಿ ...

ಬೆಂಗಳೂರು: 15 ಮಂದಿ ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಕುರಿತು ಸಂವಿಧಾನದ ಆಶಯಕ್ಕೆ ಸರಿಯಾಗಿ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದ್ದು, ಕೋರ್ಟಿನ ಆದೇಶ ಅತೃಪ್ತ ಶಾಸಕರಿಗೆ ನೈತಿಕ ಬಲ ತಂದುಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಅತೃಪ್ತ ಶಾಸಕರ ರಾಜಿನಾಮೆ ಕುರಿತು ಇಂದು ಸುಪ್ರೀಂಕೋರ್ಟ್ ತನ್ನ ತೀರ್ಪು ಪ್ರಕಟಿಸಿದ್ದು, ನಿರ್ದಿಷ್ಟ ಸಮಯದಲ್ಲಿ ರಾಜಿನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದ್ದು ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು ಎಂದು ಅವರು ಬಣ್ಣಿಸಿದರು.
ವಿಪ್ ಅತೃಪ್ತ ಶಾಸಕರಿಗೆ ಅನ್ವಯವಾಗದಿರುವುದರಿಂದ ಕೋರ್ಟ್ ಆದೇಶ ನೀಡಿರುವುದರಿಂದ ನಾಳೆ ವಿಧಾನಸಭೆಯಲ್ಲಿ ನಡೆಯುವ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ 15 ಮಂದಿ ಅತೃಪ್ತ ಶಾಸಕರು ಹಾಜರಾಗಲಿಕ್ಕಿಲ್ಲ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಹುಮತದ ವಿಶ್ವಾಸ ಕಳೆದುಕೊಂಡು ರಾಜೀನಾಮೆ ನೀಡಲಿದ್ದಾರೆ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿಯವರು ಬಹುಮತ ಕಳೆದುಕೊಂಡಿದ್ದಾರೆ. ಬಹುಮತ ಇಲ್ಲದಿರುವಾಗ ನಾಳೆ ಅವರು ರಾಜೀನಾಮೆ ನೀಡಲೇಬೇಕು. ಇದು ಕೇವಲ ಮಧ್ಯಂತರ ಆದೇಶವಷ್ಟೆ, ಸ್ಪೀಕರ್ ಅವರ ಅಧಿಕಾರವನ್ನು ಸುಪ್ರೀಂ ಕೋರ್ಟ್ ಭವಿಷ್ಯದಲ್ಲಿ ನಿರ್ಧರಿಸಲಿದೆ ಎಂದು ಹೇಳಿದರು. 
ಎಚ್‌ಡಿ ಕುಮಾರಸ್ವಾಮಿಯವರಿಂದಾಗಿ ರಾಜ್ಯದಲ್ಲಿ ಅರಾಜಕತೆ ಇದೆ, ಈ ತೀರ್ಪಿನ ನಂತರ ಅವರು ತಕ್ಷಣ ರಾಜೀನಾಮೆ ನೀಡಬೇಕು, ವಿಶ್ವಾಸ ಮತಕ್ಕಾಗಿ ಕಾಯಬಾರದು ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!