ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ, ಬಿಜೆಪಿಯಿಂದ ಅಹೋರಾತ್ರಿ ಹೋರಾಟ 
ರಾಜಕೀಯ

ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ, ಬಿಜೆಪಿಯಿಂದ ಅಹೋರಾತ್ರಿ ಹೋರಾಟ

ವಿಶ್ವಾಸಮತ ಯಾಚನೆ ಚರ್ಚೆಗಾಗಿ ಸೇರಿದ್ದ ವಿಧಾನಸಭೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರ ಗದ್ದಲದಿಂದ ತುಂಬಿದ್ದು ಕಡೆಗೆ ಸದನವನ್ನು ನಾಳೆ ಬೆಳಿಗ್ಗೆ ಹನ್ನೊಂದಕ್ಕೆ ಮುಂದೂಡಲಾಗಿದೆ.

ಬೆಂಗಳೂರು: ವಿಶ್ವಾಸಮತ ಯಾಚನೆ ಚರ್ಚೆಗಾಗಿ ಸೇರಿದ್ದ ವಿಧಾನಸಭೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರ ಗದ್ದಲದಿಂದ ತುಂಬಿದ್ದು ಕಡೆಗೆ ಸದನವನ್ನು ನಾಳೆ ಬೆಳಿಗ್ಗೆ ಹನ್ನೊಂದಕ್ಕೆ ಮುಂದೂಡಲಾಗಿದೆ.

ಈ ನಡುವೆ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಸದನದಲ್ಲೇ ಅಹೋರಾತ್ರಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.
ವಿಶ್ವಾಸ ಮತಯಾಚನೆಗೆ ಸ್ಪೀಕರ್ ವಿಳಂಬ ಂಆಡುತ್ತಿದ್ದಾರೆ  ಎಂಬ ವಿಚಾರದಲ್ಲಿ ಸದನದಲ್ಲಿ ಭಾರೀ ಕೋಲಾಹಲ ಏರ್ಪಟ್ಟ ಹಿನ್ನೆಲೆಯಲ್ಲಿ ರಾಜ್ಯಪಾಲರು ಇಂದೇ ವಿಶ್ವಾಸಮತ ಪ್ರಕ್ರಿಯೆ ಮುಗಿಸುವಂತೆ ಸ್ಪೀಕರ್ ಗೆ ಸಂದೇಶ ರವಾನಿಸಿದ್ದರು. ಆದರೆ ಅದಾಗಲೇ ಸ್ಪೀಕರ್ ರಮೇಶ್ ಕುಮಾರ್ ತಾವು ಎಜೆ ಉದಯ್ ಹೊಳ್ಳ ಜತೆ ವಿಪ್ ಜಾರಿ ಸಂಬಂಧ ಚರ್ಚೆಗೆ ತೆರಳಿದ್ದ ಕಾರಣ ಸದನವನ್ನು ಉಪಸಭಾಪತಿಗಳು ಮುನ್ನಡೆಸಿದ್ದರು.

ಸದನದಲ್ಲಿ ಗಲಾಟೆ, ಗದ್ದಲ ಮುಂದುವರಿದು ಆಡಳಿತ ಪಖ್ಷದವರೇ ಆಪರೇಶನ್ ಕಮಲ ವಿರುದ್ಧ ಸಿಡಿದು ಪ್ರತಿಭಟಿಸಿದರೆ ಬಿಜೆಪಿ ವಿಶ್ವಾಸಮತ ಯಾಚನೆ ನಡೆಸಿ ಎಂದು ಪ್ರತಿಭಟಿಸಿದೆ.

ಕಡೆಗೆ ಉಪಸಭಾಪತಿಗಳು ನಾಳೆ (ಶುಕ್ರವಾರ) ಬೆಳಿಗ್ಗೆ ಹನ್ನೊಂದಕ್ಕೆ ಸದನದ ಕಲಾಪವನ್ನು ಮುಂದೂಡಿ ಆದೇಶಿಸಿದ್ದಾರೆ.

ಆದರೆ ಸದನದಲ್ಲಿ ವಿಶ್ವಾಸಮತ ಯಾಚನೆ ಆಗುವವರೆಗೆ ಅಹೋರಾತ್ರಿ ಹೋರಾಟ ನಡೆಸುವುದಾಗಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT