ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ, ಬಿಜೆಪಿಯಿಂದ ಅಹೋರಾತ್ರಿ ಹೋರಾಟ 
ರಾಜಕೀಯ

ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ, ಬಿಜೆಪಿಯಿಂದ ಅಹೋರಾತ್ರಿ ಹೋರಾಟ

ವಿಶ್ವಾಸಮತ ಯಾಚನೆ ಚರ್ಚೆಗಾಗಿ ಸೇರಿದ್ದ ವಿಧಾನಸಭೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರ ಗದ್ದಲದಿಂದ ತುಂಬಿದ್ದು ಕಡೆಗೆ ಸದನವನ್ನು ನಾಳೆ ಬೆಳಿಗ್ಗೆ ಹನ್ನೊಂದಕ್ಕೆ ಮುಂದೂಡಲಾಗಿದೆ.

ಬೆಂಗಳೂರು: ವಿಶ್ವಾಸಮತ ಯಾಚನೆ ಚರ್ಚೆಗಾಗಿ ಸೇರಿದ್ದ ವಿಧಾನಸಭೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರ ಗದ್ದಲದಿಂದ ತುಂಬಿದ್ದು ಕಡೆಗೆ ಸದನವನ್ನು ನಾಳೆ ಬೆಳಿಗ್ಗೆ ಹನ್ನೊಂದಕ್ಕೆ ಮುಂದೂಡಲಾಗಿದೆ.

ಈ ನಡುವೆ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಸದನದಲ್ಲೇ ಅಹೋರಾತ್ರಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.
ವಿಶ್ವಾಸ ಮತಯಾಚನೆಗೆ ಸ್ಪೀಕರ್ ವಿಳಂಬ ಂಆಡುತ್ತಿದ್ದಾರೆ  ಎಂಬ ವಿಚಾರದಲ್ಲಿ ಸದನದಲ್ಲಿ ಭಾರೀ ಕೋಲಾಹಲ ಏರ್ಪಟ್ಟ ಹಿನ್ನೆಲೆಯಲ್ಲಿ ರಾಜ್ಯಪಾಲರು ಇಂದೇ ವಿಶ್ವಾಸಮತ ಪ್ರಕ್ರಿಯೆ ಮುಗಿಸುವಂತೆ ಸ್ಪೀಕರ್ ಗೆ ಸಂದೇಶ ರವಾನಿಸಿದ್ದರು. ಆದರೆ ಅದಾಗಲೇ ಸ್ಪೀಕರ್ ರಮೇಶ್ ಕುಮಾರ್ ತಾವು ಎಜೆ ಉದಯ್ ಹೊಳ್ಳ ಜತೆ ವಿಪ್ ಜಾರಿ ಸಂಬಂಧ ಚರ್ಚೆಗೆ ತೆರಳಿದ್ದ ಕಾರಣ ಸದನವನ್ನು ಉಪಸಭಾಪತಿಗಳು ಮುನ್ನಡೆಸಿದ್ದರು.

ಸದನದಲ್ಲಿ ಗಲಾಟೆ, ಗದ್ದಲ ಮುಂದುವರಿದು ಆಡಳಿತ ಪಖ್ಷದವರೇ ಆಪರೇಶನ್ ಕಮಲ ವಿರುದ್ಧ ಸಿಡಿದು ಪ್ರತಿಭಟಿಸಿದರೆ ಬಿಜೆಪಿ ವಿಶ್ವಾಸಮತ ಯಾಚನೆ ನಡೆಸಿ ಎಂದು ಪ್ರತಿಭಟಿಸಿದೆ.

ಕಡೆಗೆ ಉಪಸಭಾಪತಿಗಳು ನಾಳೆ (ಶುಕ್ರವಾರ) ಬೆಳಿಗ್ಗೆ ಹನ್ನೊಂದಕ್ಕೆ ಸದನದ ಕಲಾಪವನ್ನು ಮುಂದೂಡಿ ಆದೇಶಿಸಿದ್ದಾರೆ.

ಆದರೆ ಸದನದಲ್ಲಿ ವಿಶ್ವಾಸಮತ ಯಾಚನೆ ಆಗುವವರೆಗೆ ಅಹೋರಾತ್ರಿ ಹೋರಾಟ ನಡೆಸುವುದಾಗಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT