ಸಂಗ್ರಹ ಚಿತ್ರ 
ರಾಜಕೀಯ

ಕರ್ನಾಟಕ ರಾಜಕೀಯ ಬಿಕ್ಕಟ್ಟು: 'ವಿಶ್ವಾಸ'ಕ್ಕೆ ಕ್ಷಣಗಣನೆ, 'ಅತೃಪ್ತ'ರ ಅನರ್ಹಕ್ಕೆ ಕಾಂಗ್ರೆಸ್ ಮನವಿ

ರಾಮಲಿಂಗಾ ರೆಡ್ಡಿ ಅವರನ್ನು ಹೊರತು ಪಡಿಸಿ ಉಳಿದೆಲ್ಲಾ ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕೈ ನಾಯಕರು ದಾಖಲೆ ಸಹಿತ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ತಲೆನೋವಾಗಿರುವ ಅತೃಪ್ತ ಶಾಸಕರ ವಿರುದ್ಧ ಕಾಂಗ್ರೆಸ್ ತನ್ನ ಅಂತಿಮ ಗದಾ ಪ್ರಹಾರ ಮಾಡಲು ಮುಂದಾಗಿದ್ದು, ರಾಮಲಿಂಗಾ ರೆಡ್ಡಿ ಅವರನ್ನು ಹೊರತು ಪಡಿಸಿ ಉಳಿದೆಲ್ಲಾ ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕೈ ನಾಯಕರು ದಾಖಲೆ ಸಹಿತ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಬುಧವಾರದ ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾದ ಬೆನ್ನಲ್ಲೇ ಮೈತ್ರಿ ಕೂಟದ ನಾಯಕರು ದಿಢೀರ್ ರಂಗಪ್ರವೇಶ ಮಾಡಿ, ಹಲವು ಸುತ್ತಿನ ಕಾರ್ಯಾಚರಣೆ ನಡೆಸಿದರು. ಈ ವೇಳೆ ‌ಸಭಾಧ್ಯಕ್ಷರನ್ನು ಭೇಟಿ ಮಾಡಿ, ರಾಮಲಿಂಗಾರೆಡ್ಡಿ ಅವರನ್ನು ಹೊರತುಪಡಿಸಿ ತಮ್ಮ ಪಕ್ಷದ 12 ಶಾಸಕರು ಹಾಗೂ ಪಕ್ಷೇತರ ಶಾಸಕ ಆರ್. ಶಂಕರ್ ಅವರನ್ನು ಅನರ್ಹಗೊಳಿಸಬೇಕು ಎಂದು ದಾಖಲೆ ಸಮೇತ ಮನವಿ ಸಲ್ಲಿಸಿದರು. ಅಲ್ಲದೇ, ವಿಶ್ವಾಸ ಮತದ ಮೇಲಿನ ಚರ್ಚೆಗೆ ಸಮಯಾವಕಾಶವನ್ನೂ ಕೇಳಿದರು ಎನ್ನಲಾಗಿದೆ.
ಸರ್ಕಾರದ ವಿಶ್ವಾಸ ಇಮ್ಮಡಿಗೊಳಿಸಿದ ರಾಮಲಿಂಗಾ ರೆಡ್ಡಿ ಯೂಟರ್ನ್
ಏತನ್ಮಧ್ಯೆ, ಬಿಟಿಎಂ ಲೇಔಟ್‌ ನ ಶಾಸಕ ರಾಮಲಿಂಗಾರೆಡ್ಡಿ ತಮ್ಮ ನಿಲುವು ಬದಲಿಸಿರುವುದು ಮೈತ್ರಿಕೂಟದ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ರಾಜೀನಾಮೆ ವಾಪಸ್ ಪಡೆದು, ವಿಶ್ವಾಸ ಮತದ ವೇಳೆ ಪಕ್ಷದ ಪರ ಮತ ಹಾಕುವುದಾಗಿ ಅವರು ನಾಯಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಹೀಗಾಗಿ ಇಂದು ನಡೆಯುವ ವಿಶ್ವಾಸ ಮತದ ವೇಳೆ ರಾಮಲಿಂಗಾ ರೆಡ್ಡಿ ಸರ್ಕಾರದ ಪರ ಮತ ಹಾಕಲಿದ್ದಾರೆ ಎನ್ನಲಾಗಿದೆ. 
ಉಳಿದಂತೆ ಬೆಂಗಳೂರಿನ ಶಾಸಕರಾದ ಮುನಿರತ್ನ, ಎಸ್.ಟಿ. ಸೋಮಶೇಖರ್ ಹಾಗೂ ಬೈರತಿ ಬಸವರಾಜ್, ವಿಜಯನಗರ ಶಾಸಕ ಆನಂದ್‌ಸಿಂಗ್ ಕೂಡ ನಿಲುವು ಬದಲಾಯಿಸಲಿದ್ದಾರೆ ಎನ್ನಲಾಗುತ್ತಿದ್ದು, ಆ ಹೊತ್ತಿನಲ್ಲಿ ಪಕ್ಷೇತರರು ಧೋರಣೆ ಬದಲಿಸಬಹುದು ಎಂಬುದು ಮೈತ್ರಿ ನಾಯಕರ ಲೆಕ್ಕಾಚಾರವಾಗಿದೆ. ಈ ಕಾರಣಕ್ಕೆ ಕಲಾಪವನ್ನು ಮುಂದಿನವಾರದವರೆಗೂ ಮುಂದೂಡುವ ಯತ್ನ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT