ಬೆಂಗಳೂರು: ರಾಜ್ಯ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ನಲ್ಲಿ ಗುರುವಾರ ಬಿಜೆಪಿ ಧರಣಿ ಮುಂದುವರೆಸಿದ್ದರಿಂದ ಕಲಾಪವನ್ನು ಅಪರಾಹ್ನ 3.30 ಕ್ಕೆ ಮುಂದೂಡಿದ ಪ್ರಸಂಗ ನಡೆಯಿತು.
ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದಸ್ಯರು ನಡೆಸುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆಯಿತು. ಬೆಳಿಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಪೀಠದ ಮುಂಭಾಗ ಜಮಾಯಿಸಿದ ಪ್ರತಿಪಕ್ಷ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಭಿತ್ತಿಪತ್ರ ಪ್ರದರ್ಶಿಸಿದರು.
ಬಹುಮತವಿಲ್ಲದ ಸರ್ಕಾರವನ್ನು ನಡೆಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನೈತಿಕತೆಯಿಲ್ಲ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಧರಣಿ ನಿರತರು ಆಗ್ರಹಿಸಿದ ಕಾರಣ ಸದನದಲ್ಲಿ ಗದ್ದಲ, ಗಲಾಟೆ ಉಂಟಾಯಿತು.
ಈ ಸಂದರ್ಭದಲ್ಲಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos