ಬೆಂಗಳೂರು: ಇಂದು ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಸೋಲು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇಂದು ವಿಧಾನಸೌಧಕ್ಕೆ ತಮ್ಮ ಶಾಸಕರೊಂದಿಗೆ ಆಗಮಿಸಿದ ಬಿಎಸ್ ಯಡಿಯೂರಪ್ಪ ಅವರು ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ನೂರಕ್ಕೆ ನೂರ ಐದು ಪ್ರತಿಶತ ದೋಸ್ತಿ ಸರ್ಕಾರಕ್ಕೆ ಸೋಲು ಖಚಿತ. ನಾವು 105 ಶಾಸಕರಿದ್ದು, ಕಾಂಗ್ರೆಸ್-ಜೆಡಿಎಸ್ ಶಾಸಕರ ಸಂಖ್ಯಾ ಬಲ ನೂರಕ್ಕಿಂತಲೂ ಕಡಿಮೆಯಾಗಿದೆ. ಹೀಗಾಗಿ ಇಂದು ವಿಶ್ವಾಸ ಮತ ಯಾಚನೆಯಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲು ಖಚಿತ ಎಂದು ಹೇಳಿದರು.
ಇನ್ನು ಕೆಲವೇ ಕ್ಷಣಗಳಲ್ಲಿ ವಿಧಾನಸೌಧದಲ್ಲಿ ಕಲಾಪ ಆರಂಭವಾಗಲಿದ್ದು, ವಿಶ್ವಾಸಮತ ಯಾಚನೆಗೂ ಮುನ್ನ ನಾಯಕರಿಂದ ಚರ್ಚೆ ನಡೆಯಲಿದೆ.