ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ನಾವಿನ್ನೂ ಮಾನ ಮರ್ಯಾದೆ ಇಟ್ಟುಕೊಂಡು ಬದುಕುತ್ತಿದ್ದೇವೆ: ಸಿಎಂ ಕುಮಾರಸ್ವಾಮಿ

ಕಾಂಗ್ರೆಸ್, ಜೆಡಿಎಸ್ ನ 15 ಶಾಸಕರು ಬಂಡಾಯ ಸಾರಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಇಂದು ವಿಶ್ವಾಸಮತ ಯಾಚನೆಯ...

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ನ 15 ಶಾಸಕರು ಬಂಡಾಯ ಸಾರಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಇಂದು ವಿಶ್ವಾಸಮತ ಯಾಚನೆಯ ಅಗ್ನಿ ಪರೀಕ್ಷೆ ಎದುರಾಗಿದೆ.
ವಿಶ್ವಾಸ ಮತಯಾಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಭಾಷಣ ಮಾಡಿದರು. ಒಂದೇ ದಿನದಲ್ಲಿ ವಿಶ್ವಾಸ ಮತಯಾಚನೆ ಮುಗಿಸುವುದು ಸಾಧ್ಯವಾಗದ ಮಾತು, ಈ ಹಿಂದೆ ಒಂದೇ ದಿನದಲ್ಲಿ ಅಥವಾ ಒಂದೇ ಗಂಟೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆ  ಮಾಡಿರಬಹುದು.
ಆದರೆ ಅಂದಿನ ಬೆಳವಣಿಗೆ ಬೇರೆ, ಇಂದಿನ ಬೆಳವಣಿಗೆ ಬೇರೆ, ಸ್ಪೀಕರ್ ಬಗ್ಗೆಯೂ ಅವಿಶ್ವಾಸದ ವಾತಾವರಣ ನಿರ್ಮಿಸಿದ್ದಾರೆ. ಇದರ ಬಗ್ಗೆ ಚರ್ಚೆ ನಡೆಯಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕ ಬಿ.ಎಸ್ ಯಡಿಯೂರಪ್ಪ ಅವರು ಆತುರದಲ್ಲಿದ್ದಾರೆ, ಆದರೆ ಸದನದ ಸದಸ್ಯರಿಗೆ ಹೇಳುತ್ತೇನೆ. ನಮ್ಮದು ಲೂಟಿ ಸರ್ಕಾರವಲ್ಲ. ನಾನು ಹಾಗೂ ನಮ್ಮ ಸಂಪುಟದ ಮಂತ್ರಿಗಳು ಮಾನ, ಮರ್ಯಾದೆ ಇಟ್ಟುಕೊಂಡು ಬದುಕಿದ್ದಾರೆ.
ಚರ್ಚೆ ನಡೆಸದೇ ವಿಶ್ವಾಸಮತ ಯಾಚನೆ ಸಾಧ್ಯವೇ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಕಳೆದ 14 ತಿಂಗಳಿಂದ ಭದ್ರವಾದ ಸರ್ಕಾರ ವನ್ನು ಅಸ್ಥಿರಗೊಳಿಸುತ್ತಿರುವವರು ಯಾರು ಎಂಬ ಚರ್ಚೆ ನಡೆಯಬೇಕು. ಎಂದು ಸಿಎಂ ಹೇಳಿದ್ದಾರೆ.
ಐಎಂಎ ಪ್ರಕರಣ, ಜಿಂದಾಲ್ ಪ್ರಕರಣದ ಬಗ್ಗೆಯೂ ನಾನು ಸತ್ಯವನ್ನು ಜನರ ಮುಂದೆ ಇಡಬೇಕಾಗಿದೆ. ಬರಗಾಲ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಬೇಕು ಹೀಗಾಗಿ ಚರ್ಚೆ ನಡೆಸಲು ಸಮಯಾವಕಾಶ ನೀಡಬೇಕು. ಇಂದಿನ ರಾಜಕೀಯ ಪರಿಸ್ಥಿತಿ ಬಗ್ಗೆ ಜನರು ಚರ್ಚಿಸುತ್ತಿದ್ದಾರೆ. ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗದಂತೆ ನಾವು ಕಲಾಪದಲ್ಲಿ ಚರ್ಚೆ ನಡೆಸಬೇಕಾಗಿದೆ ಎಂದು ಸದನದಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ