ಆಡಳಿತ-ವಿಪಕ್ಷಗಳ ಗದ್ದಲ: ವಿಧಾನಸಭೆ ಕಲಾಪ ಮಧ್ಯಾಹ್ನ 3 ಕ್ಕೆ ಮುಂದೂಡಿಕೆ
ಬೆಂಗಳೂರು: ವಿಶ್ವಾಸಮತಯಾಚನೆಯಾಗದೇ, ವಿಪಕ್ಷ-ಆಡಳಿತಪಕ್ಷದ ನಾಯಕರ ಗದ್ದಲ, ವಾಗ್ವಾದಗಳ ನಡುವೆ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.
ಸದನದಲ್ಲಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭಾಷಣದ ನಂತರ ಆಡಳಿತ ಪಕ್ಷದ ನಾಯಕರು ವಿಪಕ್ಷ ನಾಯಕರ ವಿರುದ್ಧ ಶಾಸಕರಿಗೆ ಹಣದ ಆಮಿಷವೊಡ್ಡಿ ಕುದುರೆ ವ್ಯಾಪಾರ ಮಾಡುತ್ತಿರುವ ಆರೋಪ ಮಾಡಿದರು. ಈ ವೇಳೆ ಸದನದಲ್ಲಿ ಗದ್ದಲ ಉಂಟಾಯಿತು. ಜನಪ್ರತಿನಿಧಿಗಳ ವರ್ತನೆಗೆ ಅಸಮಾಧಾನಗೊಂಡ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ಖರೀದಿ ಆರೋಪಕ್ಕೆ ಸಂಬಂಧಿಸಿದಂತೆ ಆಡಳಿತ-ವಿಪಕ್ಷಗಳಿಗೆ ಚಾಟಿ ಬೀಸಿದರು. ನಿಮ್ಮ ಹೊಲಸು ವ್ಯಾಪಾರ ಸ್ವಾರ್ಥಕ್ಕಾಗಿ, ಗೌರವವಾಗಿ ಬದುಕುತ್ತಿರುವವರನ್ನು ಸಾಯಿಸುತ್ತಿದ್ದೀರಿ ಎಂದು ರಮೇಶ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.
ಪ್ರಾಮಾಣಿಕರು ಇರುವುದು ಆಡಳಿತ-ವಿಪಕ್ಷಗಳಿಗೆ ಬೇಕಿಲ್ಲ. ಎಲ್ಲವನ್ನೂ ಬಿಚ್ಚಿಡಿ ನಿಮ್ಮ ಸ್ವಾರ್ಥ ಎಲ್ಲಿಗೆ ಬೇಕಾದರೂ ಬಂದು ನಿಲ್ಲಬಹುದು ಎಂದು ಸ್ಪೀಕರ್ ಬೇಸರ ವ್ಯಕ್ತಪಡಿಸಿದರು. ಆಡಳಿತ-ವಿಪಕ್ಷಗಳ ಗದ್ದಲದ ನಡುವೆಯೇ ಸ್ಪೀಕರ್ ಮಧ್ಯಾಹ್ನ 3 ಗಂಟೆಗೆ ಕಲಾಪವನ್ನು ಮುಂದೂಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos