ಆಡಳಿತ-ವಿಪಕ್ಷಗಳ ಗದ್ದಲ: ವಿಧಾನಸಭೆ ಕಲಾಪ ಮಧ್ಯಾಹ್ನ 3 ಕ್ಕೆ ಮುಂದೂಡಿಕೆ 
ರಾಜಕೀಯ

ಆಡಳಿತ-ವಿಪಕ್ಷಗಳ ಗದ್ದಲ: ವಿಧಾನಸಭೆ ಕಲಾಪ ಮಧ್ಯಾಹ್ನ 3 ಕ್ಕೆ ಮುಂದೂಡಿಕೆ

ವಿಶ್ವಾಸಮತಯಾಚನೆಯಾಗದೇ, ವಿಪಕ್ಷ-ಆಡಳಿತಪಕ್ಷದ ನಾಯಕರ ಗದ್ದಲ, ವಾಗ್ವಾದಗಳ ನಡುವೆ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.

ಬೆಂಗಳೂರು: ವಿಶ್ವಾಸಮತಯಾಚನೆಯಾಗದೇ, ವಿಪಕ್ಷ-ಆಡಳಿತಪಕ್ಷದ ನಾಯಕರ ಗದ್ದಲ, ವಾಗ್ವಾದಗಳ ನಡುವೆ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ. 
ಸದನದಲ್ಲಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭಾಷಣದ ನಂತರ ಆಡಳಿತ ಪಕ್ಷದ ನಾಯಕರು ವಿಪಕ್ಷ ನಾಯಕರ ವಿರುದ್ಧ ಶಾಸಕರಿಗೆ ಹಣದ ಆಮಿಷವೊಡ್ಡಿ ಕುದುರೆ ವ್ಯಾಪಾರ ಮಾಡುತ್ತಿರುವ ಆರೋಪ ಮಾಡಿದರು. ಈ ವೇಳೆ ಸದನದಲ್ಲಿ ಗದ್ದಲ ಉಂಟಾಯಿತು. ಜನಪ್ರತಿನಿಧಿಗಳ ವರ್ತನೆಗೆ ಅಸಮಾಧಾನಗೊಂಡ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ಖರೀದಿ ಆರೋಪಕ್ಕೆ ಸಂಬಂಧಿಸಿದಂತೆ ಆಡಳಿತ-ವಿಪಕ್ಷಗಳಿಗೆ ಚಾಟಿ ಬೀಸಿದರು.  ನಿಮ್ಮ ಹೊಲಸು ವ್ಯಾಪಾರ ಸ್ವಾರ್ಥಕ್ಕಾಗಿ, ಗೌರವವಾಗಿ ಬದುಕುತ್ತಿರುವವರನ್ನು ಸಾಯಿಸುತ್ತಿದ್ದೀರಿ ಎಂದು ರಮೇಶ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. 
ಪ್ರಾಮಾಣಿಕರು ಇರುವುದು ಆಡಳಿತ-ವಿಪಕ್ಷಗಳಿಗೆ ಬೇಕಿಲ್ಲ. ಎಲ್ಲವನ್ನೂ ಬಿಚ್ಚಿಡಿ ನಿಮ್ಮ ಸ್ವಾರ್ಥ ಎಲ್ಲಿಗೆ ಬೇಕಾದರೂ ಬಂದು ನಿಲ್ಲಬಹುದು ಎಂದು ಸ್ಪೀಕರ್ ಬೇಸರ ವ್ಯಕ್ತಪಡಿಸಿದರು. ಆಡಳಿತ-ವಿಪಕ್ಷಗಳ ಗದ್ದಲದ ನಡುವೆಯೇ ಸ್ಪೀಕರ್ ಮಧ್ಯಾಹ್ನ 3 ಗಂಟೆಗೆ ಕಲಾಪವನ್ನು ಮುಂದೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!