ಸಿದ್ದರಾಮಯ್ಯ 
ರಾಜಕೀಯ

ವಿಶ್ವಾಸಮತ ಯಾಚನೆ ಚರ್ಚೆ ಸೋಮವಾರದವರೆಗೂ ಮುಂದುವರೆಯಬಹುದು- ಸಿದ್ದರಾಮಯ್ಯ

ವಿಶ್ವಾಸಮತ ನಿರ್ಣಯ ಮೇಲಿನ ಚರ್ಚೆ ಈಗಲೇ ಮುಗಿಯುವಂತೆ ಕಾಣುತ್ತಿಲ್ಲ. 20 ಶಾಸಕರು ಗೈರಾಗಿದ್ದಾರೆ. ಸೋಮವಾರದವರೆಗೂ ಮುಂದುವರೆಯಬಹುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಡಿಸಿರುವ ವಿಶ್ವಾಸಮತ ನಿರ್ಣಯ ಮೇಲಿನ ಚರ್ಚೆ ಈಗಲೇ ಮುಗಿಯುವಂತೆ ಕಾಣುತ್ತಿಲ್ಲ. 20 ಶಾಸಕರು ಗೈರಾಗಿದ್ದಾರೆ. ಸೋಮವಾರದವರೆಗೂ ಮುಂದುವರೆಯಬಹುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅಧಿವೇಶನವನ್ನು ಇಂತಿಷ್ಟೇ ಸಮಯಕ್ಕೆ ಮುಗಿಸಬೇಕು ಎಂದು ಆದೇಶ ನೀಡಲು ರಾಜ್ಯಪಾಲರಿಗೆ ಅಧಿಕಾರ ಇಲ್ಲ ಎಂದು ಸಹ ಅವರು ತಿಳಿಸಿದ್ದಾರೆ.
ವಿಧಾನಸಭೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಮಧ್ಯಾಹ್ನ 1-30ರ ಒಳಗಾಗಿ ವಿಶ್ವಾಸಮತ ಯಾಚನೆ ಕಲಾಪ ಮುಗಿಸುವಂತೆ ಮುಖ್ಯಮಂತ್ರಿಗೆ ಸೂಚನೆ ನೀಡಿದ್ದಾರೆ. ಆದರೆ, ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದಲ್ಲಿ ಸ್ಪೀಕರ್ ಅವರೇ ಸುಪ್ರೀಂ ಎಂದರು.
 ವಿಶ್ವಾಸಮತ ಯಾಚನೆ ಗೊತ್ತುವಳಿ ಈಗ ಸದನದ ಸೊತ್ತಾಗಿದೆ. ಹೀಗಾಗಿ ಎಷ್ಟು ಸಮಯ ಬೇಕಾದರೂ ಚರ್ಚೆ ನಡೆಯಬಹುದು. ಬಹುತೇಕ ಕಲಾಪ ಇಂದು ಮುಕ್ತಾಯವಾಗುವ ಸಾಧ್ಯತೆಗಳು ಕಡಿಮೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT