ರಾಜಕೀಯ

ಮುಂದುವರೆದ ಎಚ್ ಡಿ ರೇವಣ್ಣ ಟೆಂಪಲ್ ರನ್; ಸರ್ಕಾರದ ಉಳಿವಿಗಾಗಿ ಶಾರದಾಂಬೆ ಮೊರೆ!

ದೋಸ್ತಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದ್ದು, ಶೃಂಗೇರಿ ಶಾರದಾಂಭೆ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಚಿಕ್ಕಮಗಳೂರು: ದೋಸ್ತಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದ್ದು, ಶೃಂಗೇರಿ ಶಾರದಾಂಭೆ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸೋಮವಾರ ವಿಧಾನಸಭೆ ಕಲಾಪದಲ್ಲಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡುವ ಸಾಧ್ಯತೆ ಇದ್ದು, ಸರ್ಕಾರದ ಅಳಿವು-ಉಳಿವಿನ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ರೇವಣ್ಣ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಭೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 
ಇಂದು ಬೆಳಗಿನ ಜಾವ 5.30ಕ್ಕೆ ಶಾರದಾಂಭೆ ಹಾಗೂ ತೋರಣ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ 7.30ಕ್ಕೆ ಹಿಂದಿರುಗಿದ್ದಾರೆ. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಸಂಕಷ್ಟದಿಂದ ಪಾರು ಮಾಡಲು ಅವರು ದೇವರ ಮೊರೆ ಹೋಗುತ್ತಿದ್ದಾರೆ. ಜುಲೈ 9 ರಂದು ಅವರು ಶೃಂಗೇರಿಗೆ ಬಂದಿದ್ದರು. ಇದೇ ಜುಲೈ ತಿಂಗಳಲ್ಲೇ ಮೂರು ಬಾರಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಎಚ್. ಡಿ. ದೇವೇಗೌಡರ ಕುಟುಂಬ ಹಲವು ಬಾರಿ ಶೃಂಗೇರಿ ದೇಗುಲಕ್ಕೆ ಭೇಟಿ ಕೊಟ್ಟಿದೆ. ಹಲವು ಹೋಮ, ವಿಶೇಷ ಪೂಜೆಗಳನ್ನು ಸಲ್ಲಿಸಿದೆ. ಸೋಮವಾರ ಮಹತ್ವದ ದಿನವಾದ ಕಾರಣ ಭಾನುವಾರ ವಿಶೇಷ ಪೂಜೆ ಮಾಡಿಸಲಾಗಿದೆ. ಗುರುವಾರ ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತದ ಮೇಲಿನ ಚರ್ಚೆಯನ್ನು ಆರಂಭಿಸಲಾಗಿದೆ. ಸೋಮವಾರ ಈ ಚರ್ಚೆ ಪೂರ್ಣಗೊಳ್ಳಲಿದ್ದು, ಮತದಾನ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ