ಸಚಿವ ಸಾರಾ ಮಹೇಶ್ 
ರಾಜಕೀಯ

ಸಚಿವ ಸಾರಾ ಮಹೇಶ್ ಗೆ ಬೆದರಿಕೆ: ಯುವ ಜೆಡಿಎಸ್ ಮುಖಂಡನ ಅಮಾನತು

ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾರಾ ಮಹೇಶ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹುಣಸೂರು ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಲೋಕೇಶ್ ಎಸ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ.

ಮೈಸೂರು: ಪ್ರವಾಸೋದ್ಯಮ ಮತ್ತು ರೇಷ್ಮೆ  ಸಚಿವ ಸಾರಾ ಮಹೇಶ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹುಣಸೂರು ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಲೋಕೇಶ್ ಎಸ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ. 
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇವರನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದ್ದು, ತಾಲೂಕು ಜೆಡಿಎಸ್ ಮುಖ್ಯಸ್ಥ ಎಚ್ ಬಿ ಮಹಾದೇವಗೌಡ ಹೊರಡಿಸಿರುವ ಆದೇಶದಲ್ಲಿಯೂ ಇದನ್ನು ದೃಢಪಡಿಸಲಾಗಿದೆ.
ಹುಣಸೂರು ಶಾಸಕ ಹೆಚ್ ವಿಶ್ವನಾಥ್ ಅವರಿಗೆ ಬೆಂಬಲ ನೀಡುವುದಾಗಿ ದೂರವಾಣಿಯಲ್ಲಿ ಸಾರಾ ಮಹೇಶ್ ಗೆ ಲೋಕೇಶ್ ಹೇಳಿದ್ದರಿಂದ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎನ್ನಲಾಗಿದೆ. ಅವರಿಬ್ಬರ ನಡುವಿನ ದೂರವಾಣಿ ಸಂಭಾಷಣೆಯ ಆಡಿಯೋ ಧ್ವನಿ ಮುದ್ರಿಕೆ  ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕರುಗಳ ಪೈಕಿಯಲ್ಲಿ ಎಚ್ ವಿಶ್ವನಾಥ್ ಕೂಡಾ ಒಬ್ಬರಾಗಿದ್ದಾರೆ. 21 ನಿಮಿಷಗಳ ಧ್ವನಿ ಮುದ್ರಿಕೆಯಲ್ಲಿ  ವಿಶ್ವನಾಥ್ 28 ರಿಂದ 30 ಕೋಟಿ ರೂಪಾಯಿಯನ್ನು ಸಾಲ ಪಡೆದಿದ್ದಾರೆಯೇ? ಅವರು ಸಂಕಷ್ಟದಲ್ಲಿದ್ದಾರೆಯೇ ? ಎಂದು ಲೋಕೇಶ್ ಕೇಳುತ್ತಾರೆ. ಅದಕ್ಕೆ ಮಹೇಶ್ ಸತ್ಯ ಹೇಳುತ್ತಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT