ಡಿಕೆ ಶಿವಕುಮಾರ್ 
ರಾಜಕೀಯ

ಅತೃಪ್ತ ಶಾಸಕರು ನಮಗೆ ಮಾಡಿದ್ದನ್ನೇ ಮುಂದೆ ನಿಮಗೂ ಮಾಡುತ್ತಾರೆ: ಬಿಜೆಪಿಗೆ ಡಿಕೆಶಿ ಎಚ್ಚರಿಕೆ

ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ಮಂಗಳವಾರ ನಿರ್ಣಾಯಕ ಘಟ್ಟ ತಲುಪಿದ್ದು, ಮುಂಬೈನಲ್ಲಿರುವ ಅತೃಪ್ತ ಶಾಸಕರು ಈಗ ನಮಗೆ ಮಾಡಿದ್ದನ್ನೇ ಮುಂದೆ...

ಬೆಂಗಳೂರು: ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ಮಂಗಳವಾರ ನಿರ್ಣಾಯಕ ಘಟ್ಟ ತಲುಪಿದ್ದು, ಮುಂಬೈನಲ್ಲಿರುವ ಅತೃಪ್ತ ಶಾಸಕರು ಈಗ ನಮಗೆ ಮಾಡಿದ್ದನ್ನೇ ಮುಂದೆ ನಿಮಗೂ ಮಾಡುತ್ತಾರೆ ಎಂದು ಸಚಿವ ಡಿಕೆ ಶಿವಕುಮಾರ್ ಅವರು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರು.
ಇಂದು ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ನನ್ನನ್ನು ಜೈಲಿಗೆ ತಳ್ಳಲು ಸಂಚು ನಡೆಯುತ್ತಿದೆ. ತಪ್ಪು ಮಾಡಿದ್ದರೆ ನಾನು ಜೈಲಿಗೆ ಹೋಗಲು ಸಿದ್ಧ. ನನ್ನ ತಾಯಿಯನ್ನೂ ಬೇನಾಮಿ ಆಸ್ತಿ ಹೊಂದಿದವರೆಂದು ಬಿಂಬಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ರಚನೆಗೆ ಡಿಕೆಶಿ ಬೆಂಬಲ ಎಂದು ಬಿಂಬಿಸ್ತೀರಲ್ಲಾ? ಇದು ಸರಿನಾ? ಎಂದು ಪ್ರಶ್ನಿಸಿದ ಡಿಕೆಶಿ, 30-40 ವರ್ಷ ರಾಜಕಾರಣ ಮಾಡಿದ್ದೇನೆ. ಕುಮಾರಸ್ವಾಮಿ ವಿರುದ್ಧವೂ ಹೋರಾಡಿದ್ದೇನೆ; ದೇವೇಗೌಡರ ಜತೆಗೂ ಫೈಟ್ ಮಾಡಿದ್ದೇನೆ. ಈಗ ನಿರ್ಣಾಯಕ ಕ್ಷಣ ಬಂದಿದೆ ಎಂದರು.
ಇದೇ ವೇಳೆ ಮುಂಬೈ ಭೇಟಿಯ ಬಗ್ಗೆ ಮಾತನಾಡಿದ ಡಿಕೆಶಿ, ನಾನು ಡಕಾಯಿತನಾ? ಒಬ್ಬ ಸಚಿವ. ಸಚಿವರನ್ನು ಮುಂಬೈ ಪೊಲೀಸರು ಹೇಗೆ ನಡೆಸಿಕೊಂಡರು?. ನನಗೆ ಹೋಟೆಲ್​ಗೆ ಪ್ರವೇಶ ಕೊಟ್ಟಿಲ್ಲ. ಎಂಟಿಬಿ ನಾಗರಾಜ್ ಅವರನ್ನು ಕೂಡಿಹಾಕಿದ್ದೆನಾ? ನನ್ನ ಮನೆಗೆ ಬಂದಾಗ ಕೂಡಿಹಾಕಬಹುದಿತ್ತಿಲ್ಲ? ಎಂದರು.
ಮುಂಬೈನಲ್ಲಿರುವ ಶಾಸಕರು ಯಾರೂ ಅತೃಪ್ತರಲ್ಲ. ಅವರೆಲ್ಲರೂ ಸಂತೃಪ್ತರು. ಆದರೆ ಅವರ ರಾಜಕೀಯ ಭವಿಷ್ಯ ಇಲ್ಲಿಗೆ ಮುಕ್ತಾಯವಾಗುತ್ತಿದೆ ಎಂಬುದು ಬೇಸರವಾಗುತ್ತಿದೆ. ಶಾಸಕರನ್ನು ಅನರ್ಹಗೊಳಿಸುವ ಹಕ್ಕಿದೆ. ಈ ವಿಚಾರವನ್ನು ಶಾಸಕರಿಗೂ ಹೇಳಿದ್ದೇನೆ. ಆದರೆ ಕೇಳುತ್ತಿಲ್ಲ. ಬಿಜೆಪಿಯವರ ಮಾತು ಕೇಳಿ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್‌ ಹೇಳಿದರು.
ಇದಕ್ಕೆ ಬಿಜೆಪಿಯ ಜಗದೀಶ್‌ ಶೆಟ್ಟರ್‌ ಆಕ್ಷೇಪ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಈ ವಿಚಾರ ವಿಚಾರಣೆ ನಡೆಯುತ್ತಿದೆ. ಅನಗತ್ಯ ಶಾಸಕರನ್ನು ಹೆದರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಶಿವಕುಮಾರ್ ಹೇಳಿರುವ ವಿಚಾರ ಸರಿಯಾಗಿದೆ. ತಪ್ಪಿಲ್ಲ ಎಂದು ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT