ಡಿಕೆ ಶಿವಕುಮಾರ್ 
ರಾಜಕೀಯ

ಅತೃಪ್ತ ಶಾಸಕರು ನಮಗೆ ಮಾಡಿದ್ದನ್ನೇ ಮುಂದೆ ನಿಮಗೂ ಮಾಡುತ್ತಾರೆ: ಬಿಜೆಪಿಗೆ ಡಿಕೆಶಿ ಎಚ್ಚರಿಕೆ

ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ಮಂಗಳವಾರ ನಿರ್ಣಾಯಕ ಘಟ್ಟ ತಲುಪಿದ್ದು, ಮುಂಬೈನಲ್ಲಿರುವ ಅತೃಪ್ತ ಶಾಸಕರು ಈಗ ನಮಗೆ ಮಾಡಿದ್ದನ್ನೇ ಮುಂದೆ...

ಬೆಂಗಳೂರು: ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ಮಂಗಳವಾರ ನಿರ್ಣಾಯಕ ಘಟ್ಟ ತಲುಪಿದ್ದು, ಮುಂಬೈನಲ್ಲಿರುವ ಅತೃಪ್ತ ಶಾಸಕರು ಈಗ ನಮಗೆ ಮಾಡಿದ್ದನ್ನೇ ಮುಂದೆ ನಿಮಗೂ ಮಾಡುತ್ತಾರೆ ಎಂದು ಸಚಿವ ಡಿಕೆ ಶಿವಕುಮಾರ್ ಅವರು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರು.
ಇಂದು ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ನನ್ನನ್ನು ಜೈಲಿಗೆ ತಳ್ಳಲು ಸಂಚು ನಡೆಯುತ್ತಿದೆ. ತಪ್ಪು ಮಾಡಿದ್ದರೆ ನಾನು ಜೈಲಿಗೆ ಹೋಗಲು ಸಿದ್ಧ. ನನ್ನ ತಾಯಿಯನ್ನೂ ಬೇನಾಮಿ ಆಸ್ತಿ ಹೊಂದಿದವರೆಂದು ಬಿಂಬಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ರಚನೆಗೆ ಡಿಕೆಶಿ ಬೆಂಬಲ ಎಂದು ಬಿಂಬಿಸ್ತೀರಲ್ಲಾ? ಇದು ಸರಿನಾ? ಎಂದು ಪ್ರಶ್ನಿಸಿದ ಡಿಕೆಶಿ, 30-40 ವರ್ಷ ರಾಜಕಾರಣ ಮಾಡಿದ್ದೇನೆ. ಕುಮಾರಸ್ವಾಮಿ ವಿರುದ್ಧವೂ ಹೋರಾಡಿದ್ದೇನೆ; ದೇವೇಗೌಡರ ಜತೆಗೂ ಫೈಟ್ ಮಾಡಿದ್ದೇನೆ. ಈಗ ನಿರ್ಣಾಯಕ ಕ್ಷಣ ಬಂದಿದೆ ಎಂದರು.
ಇದೇ ವೇಳೆ ಮುಂಬೈ ಭೇಟಿಯ ಬಗ್ಗೆ ಮಾತನಾಡಿದ ಡಿಕೆಶಿ, ನಾನು ಡಕಾಯಿತನಾ? ಒಬ್ಬ ಸಚಿವ. ಸಚಿವರನ್ನು ಮುಂಬೈ ಪೊಲೀಸರು ಹೇಗೆ ನಡೆಸಿಕೊಂಡರು?. ನನಗೆ ಹೋಟೆಲ್​ಗೆ ಪ್ರವೇಶ ಕೊಟ್ಟಿಲ್ಲ. ಎಂಟಿಬಿ ನಾಗರಾಜ್ ಅವರನ್ನು ಕೂಡಿಹಾಕಿದ್ದೆನಾ? ನನ್ನ ಮನೆಗೆ ಬಂದಾಗ ಕೂಡಿಹಾಕಬಹುದಿತ್ತಿಲ್ಲ? ಎಂದರು.
ಮುಂಬೈನಲ್ಲಿರುವ ಶಾಸಕರು ಯಾರೂ ಅತೃಪ್ತರಲ್ಲ. ಅವರೆಲ್ಲರೂ ಸಂತೃಪ್ತರು. ಆದರೆ ಅವರ ರಾಜಕೀಯ ಭವಿಷ್ಯ ಇಲ್ಲಿಗೆ ಮುಕ್ತಾಯವಾಗುತ್ತಿದೆ ಎಂಬುದು ಬೇಸರವಾಗುತ್ತಿದೆ. ಶಾಸಕರನ್ನು ಅನರ್ಹಗೊಳಿಸುವ ಹಕ್ಕಿದೆ. ಈ ವಿಚಾರವನ್ನು ಶಾಸಕರಿಗೂ ಹೇಳಿದ್ದೇನೆ. ಆದರೆ ಕೇಳುತ್ತಿಲ್ಲ. ಬಿಜೆಪಿಯವರ ಮಾತು ಕೇಳಿ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್‌ ಹೇಳಿದರು.
ಇದಕ್ಕೆ ಬಿಜೆಪಿಯ ಜಗದೀಶ್‌ ಶೆಟ್ಟರ್‌ ಆಕ್ಷೇಪ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಈ ವಿಚಾರ ವಿಚಾರಣೆ ನಡೆಯುತ್ತಿದೆ. ಅನಗತ್ಯ ಶಾಸಕರನ್ನು ಹೆದರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಶಿವಕುಮಾರ್ ಹೇಳಿರುವ ವಿಚಾರ ಸರಿಯಾಗಿದೆ. ತಪ್ಪಿಲ್ಲ ಎಂದು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT