ಸಂಗ್ರಹ ಚಿತ್ರ 
ರಾಜಕೀಯ

ಪಕ್ಷೇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ ಕೋರ್ಟ್‌

ಕಾಲಮಿತಿಯೊಳಗೆ ವಿಶ್ವಾಸಮತ ಯಾಚನೆಗೆ ಸೂಚಿಸಬೇಕು ಎಂದು ಕೋರಿ ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ಮುಂದೂಡಿದೆ.

ನವದೆಹಲಿ: ಕಾಲಮಿತಿಯೊಳಗೆ ವಿಶ್ವಾಸಮತ ಯಾಚನೆಗೆ ಸೂಚಿಸಬೇಕು ಎಂದು ಕೋರಿ ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ಮುಂದೂಡಿದೆ.
ಕರ್ನಾಟಕ ವಿಧಾನಸಭೆಯಲ್ಲಿ ನಿನ್ನೆ ವಿಶ್ವಾಸಮತ ಯಾಚನೆ ನಡೆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಅರ್ಜಿಯನ್ನು ಮುಂದೂಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ಪೀಠ ಇಂದು ಬೆಳಗ್ಗೆ ಕಲಾಪ ಆರಂಭಿಸಿದಾಗ ಅರ್ಜಿದಾರರು ಮತ್ತು ಪ್ರತಿವಾದಿಗಳ ವಕೀಲರು ಇಲ್ಲದನ್ನು ಕಂಡು ವಿಚಾರಣೆಯನ್ನು ಮುಂದೂಡಿದೆ.
ಅತೃಪ್ತರ ಪರ ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಇಂದು ಸುಪ್ರೀಂಕೋರ್ಟ್‌ಗೆ ಹಾಜರಾಗಿರಲಿಲ್ಲ.  ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲ ರೋಹಟಗಿ ಮತ್ತು ಸ್ಪೀಕರ್ ಪರ ವಕೀಲ ಸಿಂಘ್ವಿ ಗೈರು ಹಾಜರಾಗಿದ್ದನ್ನು ಕಂಡ ಪೀಠ, ನಾವು ಅವರ ಉಪಸ್ಥಿತಿಯಲ್ಲಿ ತೀರ್ಪು ಪ್ರಕಟಿಸುತ್ತೇವೆ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.
ಹಾಲಿ ರಾಜಕೀಯ ಬೆಳವಣಿಗೆ ಬಳಿಕ ತಾವು ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆಯಲು ಮುಂದಾದ ಪಕ್ಷೇತರರು
ಇನ್ನು ದೋಸ್ತಿ ಸರ್ಕಾರ ವಿಶ್ವಾಸ ಮತ ಯಾಚನೆ ಮಾಡಿದ್ದು, ಅದರಲ್ಲಿ ವಿಫಲವಾಗಿ ಸರ್ಕಾರ ಉರುಳಿರುವುದರಿಂದ ಪಕ್ಷೇತರರು ತಾವು ಸಲ್ಲಿಸಿದ್ದ ಅರ್ಜಿಯ ವಾಪಸ್ ಪಡೆಯಲು ಮುಂದಾಗಿದ್ದಾರೆ. ಆದರೆ ಪ್ರಸ್ತುತ ಪಕ್ಷೇತರ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ಗೈರು ಹಾಜರಾತಿಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪೀಠ ಅರ್ಜಿ ವಿಚಾರಣೆ ಮುಂದೂಡಿದೆ.
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕರ್ನಾಟಕ ವಿಧಾನಸಭೆಯಲ್ಲಿ ಮಂಡಿಸಿದ್ದ ವಿಶ್ವಾಸಮತ ನಿರ್ಣಯ ಬಿದ್ದು ಹೋಗಿ ಸರ್ಕಾರ ಪತನಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

SCROLL FOR NEXT