ವಿಧಾನಸಭೆಯ ಸಾಂದರ್ಭಿಕ ಚಿತ್ರ 
ರಾಜಕೀಯ

ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕರಲ್ಲಿ ಪೈಪೋಟಿ

ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲು ತಯಾರಿ ...

ಬೆಂಗಳೂರು: ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲು ತಯಾರಿ ನಡೆಸುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ಪಾಳೆಯದಲ್ಲಿ ಈಗ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.
ಸರ್ಕಾರ ಪತನದ ಬಳಿಕ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ವಿಧಾನ ಸಭೆಯಲ್ಲಿ ಪ್ರತಿಪಕ್ಷ ಸ್ಥಾನ ಸಿಗುವುದು ಖಚಿತವಾಗಿದೆ.ಆದರೆ ಒಂದು ಸ್ಥಾನಕ್ಕಾಗಿ ನಾಲ್ಕು ಪ್ರಮುಖ ಘಟನಾನುಘಟಿ ನಾಯಕರು ಪೈಪೋಟಿಗೆ ಬಿದ್ದಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಕಾಂಗ್ರೆಸ್ ಶಾಸಕರ ಲೆಕ್ಕಚಾರ.ಆದರೆ ಈ ಲೆಕ್ಕಾಚಾರವನ್ನು ಮೀರಿಯೂ ಮಾಜಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್,ಮಾಜಿ ಸಚಿವ ಡಿಕೆ ಶಿವಕುಮಾರ್,ಮಾಜಿ ಸಚಿವ ಎಚ್ ಕೆ ಪಾಟೀಲ್ ವಿಪಕ್ಷ ನಾಯಕ ಸ್ಥಾನಕ್ಕಾಗಿ ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿ ಚರ್ಚೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT