ಜೆಡಿಎಲ್ ಪಿ ಸಭೆ 
ರಾಜಕೀಯ

'ಮೈತ್ರಿ'ಯಿಂದ ಒಡೆದ ಮನೆಯಾದ ಜೆಡಿಎಸ್: ಮಧ್ಯಂತರ ಚುನಾವಣೆಗೆ ಸಿದ್ದವಾಗಲು ವರಿಷ್ಠರ ಸೂಚನೆ

ಮಂಗಳವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಸೋತ ಬಳಿಕ ಬುಧವಾರ ಜೆಡಿಎಸ್ ಶಾಸಕರಾಂಗ ಪಕ್ಷದ ಸಭೆ ನಡೆಸಲಾಯಿತು. ಇದೇ ವೇಳೆ ಸಮ್ಮಿಶ್ರ ಸರ್ಕಾರ ...

ಬೆಂಗಳೂರು: ಮಂಗಳವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಸೋತ ಬಳಿಕ ಬುಧವಾರ ಜೆಡಿಎಸ್ ಶಾಸಕರಾಂಗ ಪಕ್ಷದ ಸಭೆ ನಡೆಸಲಾಯಿತು. ಇದೇ ವೇಳೆ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣಗಳೇನು ಎಂಬ ಬಗ್ಗೆ ವಿಮರ್ಶೆ ಮಾಡಲಾಯಿತು. 
ಮೈತ್ರಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಜತೆಗಿನ ಮೈತ್ರಿ ಮುಂದುವರಿಕೆ ಅಗತ್ಯವಿದೆಯೇ ಎಂಬ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಯಿತು.
ಸದ್ಯದ ಸಂದಿಗ್ಧ ಮತ್ತು ಅಸ್ಥಿರ ರಾಜಕೀಯ ಸನ್ನಿವೇಶದಲ್ಲಿ ಮೈತ್ರಿಯ ಅಗತ್ಯ ಹೆಚ್ಚಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಏನು ತೀರ್ಮಾನ ಬೇಕಾದರೂ ತೆಗೆದುಕೊಳ್ಳಲಿ. ಪಕ್ಷದ ಕಡೆಯಿಂದ ಸದ್ಯಕ್ಕೆ ಯಾವುದೇ ಹೆಜ್ಜೆ ಮುಂದಿಡುವುದು ಬೇಡ ಎಂಬ ಅಭಿಪ್ರಾಯ ಕೇಳಿ ಬಂದಿತ್ತು.
ರಾಜೀನಾಮೆ ನೀಡಿರುವ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುವ ಸಂದರ್ಭ ಎದುರಾದರೆ ಆಗಿನ ಸನ್ನಿವೇಶ ನೋಡಿಕೊಂಡು ಮುಂದುವರಿಯುವುದು ಸೂಕ್ತ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ. 
ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿ ಆಮೀಷಕ್ಕೆ ಬಲಿಯಾಗಿರುವ ಎಚ್‌.ವಿಶ್ವನಾಥ್‌, ಕೆ.ಗೋಪಾಲಯ್ಯ ಮತ್ತು ನಾರಾಯಣಗೌಡರಿಗೆ ತಕ್ಕ ಪಾಠ ಕಲಿಸಲೇಬೇಕು ಎಂದು ಹೇಳಲಾಗಿದೆ.
ಜೆಡಿಎಸ್ ಪಕ್ಷ ಸಂಘಟನೆಗೋಸ್ಕರ  ರಾಜ್ಯಾದ್ಯಂತ ಪಾದಯಾತ್ರೆ ನಡೆಸುವುದಾಗಿ ಜೆಡಿಎಸ್ ಮುಖಂಡ ಎಚ್.ಡಿ ದೇವೇಗೌಡ ಹೇಳಿದ್ದಾರೆ. ಜೊತೆಗೆ ಜೆಡಿಎಸ್ ಸದಸ್ಯತ್ವ ಅಭಿಯಾನ ಆರಂಭಿಸುವುದಾಗಿ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಮೈಸೂರು ಮತ್ತು ನಂಜನಗೂಡಿನಿಂದ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT