ರೇಣುಕಾಚಾರ್ಯ ಮತ್ತು ಯಡಿಯೂರಪ್ಪ 
ರಾಜಕೀಯ

ಬಿಎಸ್ ವೈ ಮುಖ್ಯಮಂತ್ರಿಯಾಗುತ್ತಿರುವುದು ನಮ್ಮ ಸೌಭಾಗ್ಯ: ಎಂಪಿ ರೇಣುಕಾಚಾರ್ಯ

ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋತಿತ್ತು, ನಾಲ್ಕು ದಿನಗಳ ನಂತರ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಬಿ.ಎಸ್ ಯಡಿಯೂರಪ್ಪ ..

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋತಿತ್ತು, ನಾಲ್ಕು ದಿನಗಳ ನಂತರ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ,  ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಿದ್ದಾರೆ. ಇದು ನಮ್ಮ ಸೌಭಾಗ್ಯ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರಿನ ಬಿ.ಎಸ್.ವೈ ನಿವಾಸ ಡಾಲರ್ಸ್ ಕಾಲೋನಿಯ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡ್ತಿದ್ದಾರೆ ಇದು ನಾಡಿನ ಜನತೆಗೆ ಸಿಹಿ ಸುದ್ದಿಯಾಗಿದೆ. ಬಹುಮತ ಸಾಬೀತನ್ನು ರಾಜ್ಯಪಾಲರು ನಿಗದಿ ಮಾಡಲಿದ್ದಾರೆ. ನಮ್ಮ ಸಂಖ್ಯಾಬಲ ಹೆಚ್ಚಿದೆ. ಕಾನೂನಿನಡಿಯಲ್ಲಿ ಅತೃಪ್ತರ ರಾಜೀನಾಮೆ ಬಗೆಹರೆಯಲಿದೆ ಎಂದು ರೇಣುಕಾಚಾರ್ಯ ಹೇಳಿದರು.
ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಈ ರಾಜ್ಯಕ್ಕೆ ಸುಭದ್ರ ಸರಕಾರ ಕೊಡುವುದು ನಮ್ಮ ಮೊದಲ ಆದ್ಯತೆ, ಮುಂಬೈನಲ್ಲಿರುವ ಶಾಸಕರು ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಶಾಸಕ ರೇಣುಕಾಚಾರ್ಯ ಇದೇ ವೇಳೆ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

SCROLL FOR NEXT