ಸಿದ್ದರಾಮಯ್ಯ 
ರಾಜಕೀಯ

ಯಡಿಯೂರಪ್ಪ ಬಹುಮತ ಸಾಬೀತು ತಡೆಗೆ ಕಾಂಗ್ರೆಸ್ ಹೊಸ ತಂತ್ರ.!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ಮಹತ್ವದ ಮಾತುಕತೆ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ಮಹತ್ವದ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕೂತುಹಲ ಕೆರಳಿಸಿದೆ.
ಈ ಮೂಲಕ ಮುಂಬೈನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಜೆಡಿಎಸ್ ಅತೃಪ್ತ ಶಾಸಕರನ್ನು ಸೆಳೆಯಲು  ಪ್ರಯತ್ನ ನಡೆದಿದೆ ಎಂಬ ಕೂತುಹಲ ಗರಿಗೆದರಿದೆ.
ಲಭ್ಯವಾಗಿರುವ  ಖಚಿತ ಮಾಹಿತಿಯ ಪ್ರಕಾರ ಎಸ್.ಟಿ.ಸೋಮಶೇಖರ್, ಭೈರತಿ, ಮುನಿರತ್ನ ಅವರನ್ನು ಮರಳಿ ಸೆಳೆಯುವ ಪ್ರಯತ್ನ ನಡೆದಿದೆ ಎನ್ನಲಾಗಿದೆ. ಜೊತೆಗೆ ಈ ಮೂವರು ಶಾಸಕರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವೊಲಿಸಿ, ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನವೂ ನಡೆದಿದೆ ಎನ್ನಲಾಗಿದೆ. 
ಮೂವರು ಶಾಸಕರು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂದೂ ಹೇಳಲಾಗುತ್ತಿದ್ದು, ಬಿಜೆಪಿ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸದಂತೆ ಅಡ್ಡಗಾಲು ಹಾಕಲು ಕಾಂಗ್ರೆಸ್ ಈ ತಂತ್ರಗಾರಿಕೆ ಮಾಡುತ್ತಿದೆ ಎಂದೂ ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT