ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ಮಹತ್ವದ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕೂತುಹಲ ಕೆರಳಿಸಿದೆ.
ಈ ಮೂಲಕ ಮುಂಬೈನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಜೆಡಿಎಸ್ ಅತೃಪ್ತ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆದಿದೆ ಎಂಬ ಕೂತುಹಲ ಗರಿಗೆದರಿದೆ.
ಲಭ್ಯವಾಗಿರುವ ಖಚಿತ ಮಾಹಿತಿಯ ಪ್ರಕಾರ ಎಸ್.ಟಿ.ಸೋಮಶೇಖರ್, ಭೈರತಿ, ಮುನಿರತ್ನ ಅವರನ್ನು ಮರಳಿ ಸೆಳೆಯುವ ಪ್ರಯತ್ನ ನಡೆದಿದೆ ಎನ್ನಲಾಗಿದೆ. ಜೊತೆಗೆ ಈ ಮೂವರು ಶಾಸಕರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವೊಲಿಸಿ, ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನವೂ ನಡೆದಿದೆ ಎನ್ನಲಾಗಿದೆ.
ಮೂವರು ಶಾಸಕರು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂದೂ ಹೇಳಲಾಗುತ್ತಿದ್ದು, ಬಿಜೆಪಿ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸದಂತೆ ಅಡ್ಡಗಾಲು ಹಾಕಲು ಕಾಂಗ್ರೆಸ್ ಈ ತಂತ್ರಗಾರಿಕೆ ಮಾಡುತ್ತಿದೆ ಎಂದೂ ಹೇಳಲಾಗುತ್ತಿದೆ.