ರಾಜಕೀಯ

'ಸೇಡಿನ ರಾಜಕಾರಣ ಮಾಡಲ್ಲ, ಪಾರದರ್ಶಕ ಆಡಳಿತ- ಮುಖ್ಯಮಂತ್ರಿ ಯಡಿಯೂರಪ್ಪ

Nagaraja AB
ಬೆಂಗಳೂರು: ನೂತನ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ  ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಬಿಜೆಪಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಆಡಳಿತದಲ್ಲಿ ಬದಲಾವಣೆ ತರುತ್ತೇವೆ.ಸೇಡಿನ ರಾಜಕಾರಣ ಮಾಡಲ್ಲ, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಉತ್ತಮ ಆಡಳಿತ ನೀಡುವುದಾಗಿ ಭರವಸೆ ನೀಡಿದರು.
ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ತುಘಲಕ್ ದರ್ಬಾರ್ ನಡೆಸಲಾಗುತಿತ್ತು. ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿತ್ತು ಎಂದು ಆರೋಪಿಸಿದರು.ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಪಕ್ಷದ ಕಾರ್ಯಕರ್ತರ ಪಾತ್ರ ಮಹತ್ವದಾಗಿತ್ತು, ಪ್ರಾಮಾಣಿಕ ರೀತಿಯಲ್ಲಿ ಆಡಳಿತ ನೀಡುವುದಾಗಿ ಭರವಸೆ ನೀಡಿದರು. 
ರೈತರು, ಮೀನುಗಾರರು, ಬುಡುಕಟ್ಟು ಸಮುದಾಯ, ನೇಕಾರರು ಹಾಗೂ ಪಕ್ಷದ ಅಸಂಖ್ಯಾತ ಕಾರ್ಯಕರ್ತರು ಹೊಸ ಸರ್ಕಾರದ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದು, ಅವರ ನಿರೀಕ್ಷೆಗಳನ್ನು ಹುಸಿಮಾಡಲ್ಲ ಎಂದು ಯಡಿಯೂರಪ್ಪ ಹೇಳಿದರು.
SCROLL FOR NEXT