ರಾಜಕೀಯ

ಯಡಿಯೂರಪ್ಪ ನಾಯಕತ್ವದಡಿ ಬಿಜೆಪಿಯಿಂದ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತ- ಅಮಿತ್ ಶಾ

Nagaraja AB
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭಿನಂದಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಿ.ಎಸ್ ಯಡಿಯೂರಪ್ಪ ನಾಯಕತ್ವದಡಿ  ಬಿಜೆಪಿ ಸುಭದ್ರ, ರೈತಪರ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ನೀಡಲಿದೆ. ಕರ್ನಾಟಕದ ಜನತೆಯ ಆಶೋತ್ತರಗಳನ್ನು ಕಾಪಾಡುವಲ್ಲಿ ಬಿಜೆಪಿ ಬದ್ಧವಾಗಿರುವುದಾಗಿ ಕೇಂದ್ರ ಗೃಹ ಸಚಿವರು ಆಗಿರುವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಾಜೂಬಾಯಿ ವಾಲಾ , ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಹಾಗೂ ಅಧಿಕಾರದ ಗೌಪ್ಯತೆ ಬೋಧಿಸಿದರು.
SCROLL FOR NEXT