ಸಂಗ್ರಹ ಚಿತ್ರ 
ರಾಜಕೀಯ

ಯಡಿಯೂರಪ್ಪ ನಾಯಕತ್ವದಡಿ ಬಿಜೆಪಿಯಿಂದ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತ- ಅಮಿತ್ ಶಾ

ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭಿನಂದಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭಿನಂದಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಿ.ಎಸ್ ಯಡಿಯೂರಪ್ಪ ನಾಯಕತ್ವದಡಿ  ಬಿಜೆಪಿ ಸುಭದ್ರ, ರೈತಪರ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ನೀಡಲಿದೆ. ಕರ್ನಾಟಕದ ಜನತೆಯ ಆಶೋತ್ತರಗಳನ್ನು ಕಾಪಾಡುವಲ್ಲಿ ಬಿಜೆಪಿ ಬದ್ಧವಾಗಿರುವುದಾಗಿ ಕೇಂದ್ರ ಗೃಹ ಸಚಿವರು ಆಗಿರುವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಾಜೂಬಾಯಿ ವಾಲಾ , ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಹಾಗೂ ಅಧಿಕಾರದ ಗೌಪ್ಯತೆ ಬೋಧಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT