ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿ ಸರ್ಕಾರ ರಚನೆ ಸಂವಿಧಾನ ಬಾಹಿರ, ಕುದುರೆ ವ್ಯಾಪಾರಕ್ಕೆ ಗೆಲುವು: ಸಿದ್ದರಾಮಯ್ಯ

ಅತೃಪ್ತ ಶಾಸಕರು ಬಂದಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ. ಬಿ.ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದೇ ಸಂವಿಧಾನ ಬಾಹಿರವಾಗಿದೆ...

ಬೆಂಗಳೂರು: ಅತೃಪ್ತ ಶಾಸಕರು ಬಂದಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ. ಬಿ.ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದೇ ಸಂವಿಧಾನ ಬಾಹಿರವಾಗಿದೆ. ಬಿಜೆಪಿಯವರು ಹಣದ ಆಮಿಷ ಒಡ್ಡಿ ಕುದುರೆ ವ್ಯಾಪಾರ ನಡೆಸಿದ್ದು, ಇದು ಬಿಜೆಪಿ ಗೆಲವು ಅಲ್ಲ. ಕುದುರೆ ವ್ಯಾಪಾರಕ್ಕೆ ಸಿಕ್ಕ ಜಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಶನಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಇಂದು ನಗರದ ಗಾಂಧೀ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ರಾಜ್ಯದಲ್ಲಿ ಬಿಜೆಪಿ ಸಂವಿಧಾನಾತ್ಮಕವಾಗಿ ಸರ್ಕಾರ ರಚಿಸಿಲ್ಲ. ಬಿಜೆಪಿ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. 
ಸ್ಪೀಕರ್ ಮೂವರು ಶಾಸಕರನ್ನು ಅನರ್ಹಗೊಳಿಸಿದ ನಂತರ ವಿಧಾಸಭೆಯ ಬಲ 221ಕ್ಕೆ ಇಳಿದಿದೆ. ಬಹುಮತ ಸಾಬೀತಾಗೆ 111 ಸದಸ್ಯರ ಅಗತ್ಯ ಇದೆ. ಆದರೆ ಬಿಜೆಪಿ ಕೇವಲ 105 ಶಾಸಕರನ್ನು ಹೊಂದಿದ್ದು, ಸೋಮವಾರ ಹೇಗೆ ಬಹುಮತ ಪಡೆಯಲಿದೆ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ 111 ಶಾಸಕರ ಪಟ್ಟಿಯನ್ನು ರಾಜ್ಯಪಾಲರಿಗೆ ನೀಡಬೇಕಿತ್ತು. ಆದರೆ ಸಂಖ್ಯಾಬಲ ಇಲ್ಲದ ಕಾರಣ ಅವರು ಪಟ್ಟಿ ನೀಡಿಲ್ಲ. ಹೀಗಾಗಿ ಬಿಎಸ್ ವೈ ಸರ್ಕಾರ ಸಂವಿಧಾನಾತ್ಮಕವಾಗಿ ರಚನೆಯಾದ ಸರ್ಕಾರ ಅಲ್ಲ ಎಂದರು.
ಬಹುಮತ ಇಲ್ಲದೆಯೇ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಕುದುರೆ ವ್ಯಾಪಾರ ಮಾಡಿ ಜನರಿಂದ ಸಿಕ್ಕ ಜಯ ಎನ್ನುತ್ತಿದ್ದಾರೆ. ಇದು ಜನರ ವಿಜಯ ಅಲ್ಲ, ಕುದುರೆ ವ್ಯಾಪಾರದ ವಿಜಯ' ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT