ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ 
ರಾಜಕೀಯ

ಸ್ಪೀಕರ್ ಅನರ್ಹತೆ ನಿರ್ಧಾರ ಪ್ರಶ್ನಿಸಿ ಮೂವರು ಅತೃಪ್ತ ಶಾಸಕರು 'ಸುಪ್ರೀಂ' ಮೊರೆ

ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅತೃಪ್ತ ಶಾಸಕರಾದ ರಮೇಶ್ ಎಲ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಪಕ್ಷೇತರ ಶಾಸಕ...

ಬೆಂಗಳೂರು: ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅತೃಪ್ತ ಶಾಸಕರಾದ ರಮೇಶ್ ಎಲ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಪಕ್ಷೇತರ ಶಾಸಕ ಆರ್ ಶಂಕರ್ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದಾರೆ. 
ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಕಳೆದ ಗುರುವಾರ ಇವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಮುಂದಿನ ಉಪ ಚುನಾವಣೆಯಲ್ಲಿ ಕೂಡ ಅವರು ಸ್ಪರ್ಧಿಸುವಂತಿಲ್ಲ ಎಂದು ನಿಷೇಧ ಹೇರಲಾಗಿದೆ.
ಸಂವಿಧಾನದ 10ನೇ ವಿಧಿಯ ಪ್ಯಾರಾ 2 (1) (ಎ)ಯಡಿ ಮತ್ತು 191(ಎ)ಯಡಿ 15ನೇ ರಾಜ್ಯ ವಿಧಾನಸಭೆಯ ಶಾಸಕ ಸ್ಥಾನದಿಂದ ಈ ಮೂವರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ.
15ನೇ ವಿಧಾನಸಭೆಯ 5 ವರ್ಷಗಳ ಅವಧಿ ಮುಗಿಯುವವರೆಗೆ 2023ರವರೆಗೆ ಇವರನ್ನು ಸದಸ್ಯ ಸ್ಥಾನದಿಂದ ಸ್ಪೀಕರ್ ಅನರ್ಹಗೊಳಿಸಿದ್ದಾರೆ. 
ರಾಣೆಬೆನ್ನೂರು ಶಾಸಕ ಆರ್ ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಿಯಮದಡಿ ಸಂವಿಧಾನದ 10ನೇ ವಿಧಿಯಡಿ ಅನರ್ಹಗೊಳಿಸಲಾಗಿದೆ, ಅವರು ಉಪ ಚುನಾವಣೆಯಲ್ಲಿ ಕೂಡ ಸ್ಪರ್ಧಿಸುವಂತಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!