ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ 
ರಾಜಕೀಯ

ಸ್ಪೀಕರ್ ಅನರ್ಹತೆ ನಿರ್ಧಾರ ಪ್ರಶ್ನಿಸಿ ಮೂವರು ಅತೃಪ್ತ ಶಾಸಕರು 'ಸುಪ್ರೀಂ' ಮೊರೆ

ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅತೃಪ್ತ ಶಾಸಕರಾದ ರಮೇಶ್ ಎಲ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಪಕ್ಷೇತರ ಶಾಸಕ...

ಬೆಂಗಳೂರು: ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅತೃಪ್ತ ಶಾಸಕರಾದ ರಮೇಶ್ ಎಲ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಪಕ್ಷೇತರ ಶಾಸಕ ಆರ್ ಶಂಕರ್ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದಾರೆ. 
ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಕಳೆದ ಗುರುವಾರ ಇವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಮುಂದಿನ ಉಪ ಚುನಾವಣೆಯಲ್ಲಿ ಕೂಡ ಅವರು ಸ್ಪರ್ಧಿಸುವಂತಿಲ್ಲ ಎಂದು ನಿಷೇಧ ಹೇರಲಾಗಿದೆ.
ಸಂವಿಧಾನದ 10ನೇ ವಿಧಿಯ ಪ್ಯಾರಾ 2 (1) (ಎ)ಯಡಿ ಮತ್ತು 191(ಎ)ಯಡಿ 15ನೇ ರಾಜ್ಯ ವಿಧಾನಸಭೆಯ ಶಾಸಕ ಸ್ಥಾನದಿಂದ ಈ ಮೂವರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ.
15ನೇ ವಿಧಾನಸಭೆಯ 5 ವರ್ಷಗಳ ಅವಧಿ ಮುಗಿಯುವವರೆಗೆ 2023ರವರೆಗೆ ಇವರನ್ನು ಸದಸ್ಯ ಸ್ಥಾನದಿಂದ ಸ್ಪೀಕರ್ ಅನರ್ಹಗೊಳಿಸಿದ್ದಾರೆ. 
ರಾಣೆಬೆನ್ನೂರು ಶಾಸಕ ಆರ್ ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಿಯಮದಡಿ ಸಂವಿಧಾನದ 10ನೇ ವಿಧಿಯಡಿ ಅನರ್ಹಗೊಳಿಸಲಾಗಿದೆ, ಅವರು ಉಪ ಚುನಾವಣೆಯಲ್ಲಿ ಕೂಡ ಸ್ಪರ್ಧಿಸುವಂತಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT