ಸಿದ್ದರಾಮಯ್ಯ 
ರಾಜಕೀಯ

ಎಂಬಿ ಪಾಟೀಲ್ ಹೇಳಿದ್ದು ನಿಜ, ಇಬ್ಬರು ಅತೃಪ್ತ ಶಾಸಕರು ನನಗೆ ಫೋನ್ ಮಾಡಿದ್ದರು: ಸಿದ್ದರಾಮಯ್ಯ

ಇಬ್ಬರು ಅತೃಪ್ತ ಶಾಸಕರು ಕರೆ ಮಾಡಿದ್ದು ನಿಜ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

ಬೆಂಗಳೂರು: ಇಬ್ಬರು ಅತೃಪ್ತ ಶಾಸಕರು ಕರೆ ಮಾಡಿದ್ದು ನಿಜ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ, ಎಂ ಬಿ ಪಾಟೀಲ್ ಹೇಳಿರೋದು ನಿಜ. ಇಬ್ಬರು ಅತೃಪ್ತರು ನನಗೆ ಕರೆ ಮಾಡಿದ್ದರು, ಆದರೆ ನಾನು ಪೋನ್ ರಿಸೀವ್ ಮಾಡಿಲ್ಲ.ಅವರು ತಮ್ಮನ್ನು ಅನರ್ಹತೆ ಮಾಡುತ್ತಾರೆ ಎಂಬ ಭಯದಿಂದ ನನಗೆ ಕರೆ ಮಾಡಿದ್ದರು ಎಂದು ಹೇಳಿದ್ದಾರೆ.
ಅವರ ಫೋನ್ ನಾನು ಯಾಕೆ ರಿಸೀವ್ ಮಾಡಬೇಕು? ಅದು ಮುಖ್ಯವಾದ ವಿಷಯ ಅಲ್ಲ ಎನ್ನುವ ಮೂಲಕ ಅತೃಪ್ತರಿಗೆ ಸ್ಟ್ರಾಂಗ್​ಮೆಸೇಜ್ ರವಾನಿಸಿದ್ದಾರೆ ಸಿದ್ಧರಾಮಯ್ಯ.
ಮೂವರು ಶಾಸಕರು ಅನರ್ಹರಾದ ಬೆನ್ನಲ್ಲೇ ಇನ್ನುಳಿದ ಶಾಸಕರಿಗೂ ಅನರ್ಹತೆಯ ಭೀತಿ ಎದುರಾಗಿದೆ, ಹೀಗಾಗಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ್ದರು ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದರು, ಎಂಬಿ ಪಾಟೀಲ್ ಹೇಳಿಕೆಗೆ ಸಿದ್ದರಾಮಯ್ಯ ಸಮರ್ಥನೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT