ರಾಜಕೀಯ

ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ: ದೇವೇಗೌಡ ಕಣ್ಣೀರು

Srinivas Rao BV
ಜೆಡಿಎಸ್ ನ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕಣ್ಣೀರಿಟ್ಟಿದ್ದಾರೆ. 
ಜೆಪಿ ಭವನದಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಮೈತ್ರಿ ಸರ್ಕಾರದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸ್ಥಾನಮಾನ ನೀಡಲು ಸಾಧ್ಯವಾಗಲಿಲ್ಲ. ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ, ಅವರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರು ಕಷ್ಟದಲ್ಲಿ ಭಾಗಿಯಾಗಿದ್ದಾರೆ. ಆ.7ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ. 
ಕಾಂಗ್ರೆಸ್ ವಿರುದ್ಧ ಕುಪೇಂದ್ರ ರೆಡ್ಡಿ ಅಸಮಾಧಾನ 
ಇನ್ನು ಮೈತ್ರಿ ಸರ್ಕಾರ ಪತನಗೊಂಡಿರುವುದಕ್ಕೆ ಜೆಡಿಎಸ್ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ನಾಯಕರು ಸರಿಯಾಗಿ ಇದ್ದಿದ್ದರೆ ಸರ್ಕಾರ ಬೀಳುತ್ತಿರಲಿಲ್ಲ ಎಂದು ಹೆಚ್ ಡಿ ದೇವೇಗೌಡರ ಬಳಿ ಹೇಳಿದ್ದಾರೆ. 
ಎಸ್ ಟಿ ಸೋಮಶೇಖರ್ ಸ್ವಾರ್ಥ, ಅಧಿಕಾರಕ್ಕಷ್ಟೇ ಸೀಮಿತರಾದರು, ಮೈತ್ರಿಯಿಂದ ಸಾಕಷ್ಟು ಸಮಸ್ಯೆ ಉಂಟಾಗಿತ್ತು ಎಂದು ಹೇಳಿದ್ದಾರೆ. 
SCROLL FOR NEXT