ಸಿದ್ದರಾಮಯ್ಯ 
ರಾಜಕೀಯ

14 ಶಾಸಕರನ್ನು ಅನರ್ಹಗೊಳಿಸಿ ಹೊರಡಿಸಿರುವ ಆದೇಶ ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು; ಸಿದ್ದರಾಮಯ್ಯ

ವಿಧಾನಸಭಾಧ್ಯಕ್ಷ ಕೆ.ಆರ್​. ರಮೇಶ್​ಕುಮಾರ್​ ಅವರು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ...

ಬೆಂಗಳೂರು: ವಿಧಾನಸಭಾಧ್ಯಕ್ಷ ಕೆ.ಆರ್​. ರಮೇಶ್​ಕುಮಾರ್​ ಅವರು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ನೀಡಿರುವ ತೀರ್ಮಾನ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು. ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ಈ ಕುರಿತು ಟ್ವೀಟ್ ಮಾಡಿರುವ ಅವರು, ಅತೃಪ್ತ ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯಡಿ ಅನರ್ಹಗೊಳಿಸಿದ್ದಾರೆ. ಸ್ವಾರ್ಥ ಸಾಧನೆ, ಅಧಿಕಾರದಾಸೆಯಿಂದ ಜನಾದೇಶವನ್ನು ಧಿಕ್ಕರಿಸಿ ತಮ್ಮನ್ನು ತಾವು ಮಾಡಿಕೊಳ್ಳುವ ಹೀನ ಸಂಸ್ಕೃತಿಗೆ ಈ ತೀರ್ಪು ಇತಿಶ್ರೀ ಹಾಡಲಿದೆ ಎಂಬುದು ನನ್ನ ನಂಬಿಕೆ ಎಂದರು. 
ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಪದವಿ, ಅಧಿಕಾರ ರಾಜಕಾರಣದಲ್ಲಿ ಎಂದಿಗೂ ಶಾಶ್ವತವಲ್ಲ. ಮುಂದಿನ ಪೀಳಿಗೆಯ ರಾಜಕಾರಣಕ್ಕೆ ನಾವು ಮಾದರಿಯಾಗಿ ಏನನ್ನು ಬಿಟ್ಟುಹೋಗುತ್ತೇವೆ ಎಂಬುದು ಮುಖ್ಯ ಸಭಾಧ್ಯಕ್ಷರ ಇಂದಿನ ತೀರ್ಪು ಮುಂದಿನ ಪೀಳಿಗೆಯ ರಾಜಕಾರಣಕ್ಕೆ ಶಿಸ್ತಿನ ಮಾದರಿಯನ್ನು ತಿಳಿಸಿಕೊಡುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT